ಪಲ್ಲೋಡಿ ಶ್ರೀ ಉಳ್ಳಾಕುಲು ಕಲಾರಂಗದ ವತಿಯಿಂದ ಸ್ವಾತಂತ್ರ್ಯ ದ ಅಮೃತ ಮಹೋತ್ಸವ ಆಚರಣೆ

0

ಪಂಜದ ಪಲ್ಲೋಡಿ ಶ್ರೀ ಉಳ್ಳಾಕುಲು ಕಲಾರಂಗದ ವತಿಯಿಂದ ಸ್ವಾತಂತ್ರ್ಯ ದ ಅಮೃತ ಮಹೋತ್ಸವ ಆಚರಣೆ ಶಿಶು ಮಂದಿರದ ವಠಾರದಲ್ಲಿ ಆ.15 ರಂದು ಜರುಗಿತು.

 

ಮಾಜಿ ಯೋಧ ದಾಮೋದರ ಪಲ್ಲೋಡಿ
ಧ್ವಜಾರೋಹಣ ನೆರವೇರಿಸಿದರು. ಕಲಾರಂಗದ ಅಧ್ಯಕ್ಷ
ಕವನ್ ಪಲ್ಲೋಡಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ
ಪ್ರದೀಪ್ ಪಲ್ಲೋಡಿ , ಸದಸ್ಯರು, ಊರವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಲಾರಂಗದ ಉಪಾಧ್ಯಕ್ಷ ಬಾಲಕೃಷ್ಣ ಪಲ್ಲೋಡಿ ಧ್ವಜಾರೋಹಣ ಕಾರ್ಯಕ್ರಮ ನಿರ್ವಹಿಸಿದರು.
ಪ್ರಕಾಶ್‌ ಜಾಕೆ ನಿರೂಪಿಸಿದರು.