ಕನಕಮಜಲು ಮೊಗೇರ ಸೇವಾ ಸಮಿತಿ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

0

ಮೊಗೇರ ಸೇವಾ ಸಮಿತಿ ಕನಕಮಜಲು ವತಿಯಿಂದ ದ. ಕ. ಜಿ. ಪಂ. ಶ್ರೀ. ನ. ರಾ. ಗೌಡ ಹಿರಿಯ ಪ್ರಾಥಮಿಕ ಶಾಲೆ ಕನಕಮಜಲಿನಲ್ಲಿ ಆ.15 ರಂದು ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು.

ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಹಮೀದ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಡೆದ ನಿವೃತ್ತ ಯೋಧ ಜಯರಾಮ ಗೌಡ ಮತ್ತು ಶ್ರೀಮತಿ ಜಾನಕಿ ರಾಮಕೃಷ್ಣರವರು, ಮುಖ್ಯೋಪಾಧ್ಯಾಯರು, ಉಪಸ್ಥಿತರಿದ್ದರು.
ಮೊಗೇರ ಸಮಿತಿ ಕನಕಮಜಲು ಇದರ ಅಧ್ಯಕ್ಷ ಚಂದ್ರಶೇಖರ, ಕಾರ್ಯದರ್ಶಿ ಚಂದ್ರಶೇಖರ ಕೆ, ತಾಲೂಕು ಮೊಗೇರ ಸಮಿತಿ ಪದಾಧಿಕಾರಿ ಬಾಬು ಕನಕಮಜಲು ಸಂಘದ ವತಿಯಿಂದ ಶಾಲೆಯ ಎಲ್ಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಿಸಿದರು. ಈ ಸಂದರ್ಭದಲ್ಲಿ ಮೊಗೇರ ಸಮಿತಿ ಸದಸ್ಯರು, ಶಾಲಾ ಎಸ್ ಡಿ ಎಂ ಸಿ ಸದಸ್ಯರು, ಶಾಲಾ ಮಕ್ಕಳು, ಶಿಕ್ಷಕರು, ಪೋಷಕರು ಉಪಸ್ಥಿತರಿದ್ದರು.