ಕಾಲುಗಳ ಸ್ವಾಧೀನವನ್ನು ಕಳೆದುಕೊಂಡಿರುವ ರವಿ ಜಯನಗರರವರಿಗೆ ಕೆಪಿಸಿಸಿ ಸಂಯೋಜಕ ನಂದಕುಮಾರ್ ರವರಿಂದ ಧನ ಸಹಾಯ

0

ಕಳೆದ ಆರು ತಿಂಗಳ ಹಿಂದೆ ಮನೆ ಕಂಪೌಂಡ್ ನಿರ್ಮಾಣದ ಕೆಲಸ ಮಾಡುತ್ತಿದ್ದ ಸಂದರ್ಭ ಆಯತಪ್ಪಿ ಬಿದ್ದು ಎರಡು ಕಾಲುಗಳ ಸಂಪೂರ್ಣ ಸ್ವಾಧೀನವನ್ನು ಕಳೆದುಕೊಂಡಿರುವ ರವಿ ಜಯನಗರರವರು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೆಪಿಸಿಸಿ ಸಂಯೋಜಕ ನಂದಕುಮಾರ್ ಮಡಿಕೇರಿ ಇಂದು ಆಸ್ಪತ್ರೆಗೆ ಭೇಟಿ ನೀಡಿ ರವಿಯವರ ಆರೋಗ್ಯ ಕ್ಷೇಮವನ್ನು ವಿಚಾರಿಸಿ ಚಿಕಿತ್ಸೆಗೆ ಧನ ಸಹಾಯ ನೀಡಿದರು.


ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಸಚಿನ್ ರಾಜ್ ಶೆಟ್ಟಿ, ಎಂ ಜೆ ಶಶಿಧರ , ವಸಂತ,ಬೋಜಪ್ಪ ನಾಯ್ಕ, ಹರಿಪ್ರಸಾದ್ ಅಡ್ಕಾರು, ತಿರುಮಲೇಶ್ವರಿ, ಗುಲಾಬಿ ಮೊದಲಾದವರು ಉಪಸ್ಥಿತರಿದ್ದರು.