ಬೊಳ್ಳಾಜೆ : ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಮತ್ತು ವಿವಿಧ ಆಟೋಟ ಸ್ಪರ್ಧೆಯ ಉದ್ಘಾಟನೆ

0

 

 

ಶ್ರೀ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಬೊಳ್ಳಾಜೆ ಯ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ 28ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಇಂದು ಉದ್ಘಾಟನೆಯಾಯಿತು.

 

 

ಬೆಳಿಗ್ಗೆ 8.30 ಗಂಟೆಗೆ ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ ಕೊರತ್ತೋಡಿ ಇದರ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಿತು. ಬಳಿಕ ನಡೆದ ಉದ್ಘಾಟನಾ ಕಾರ್ಯಕ್ರಮದ ನಿವೃತ್ತ ಸೈನಿಕ ಉಮೇಶ್ ದೊಡ್ಡತೋಟ ರವರು ಕಾರ್ಯಕ್ರಮ ವನ್ನು ಉದ್ಘಾಟಿಸಿದರು. ಶೈಕ್ಷಣಿಕ ಸಮನ್ವಯ ಸಮಿತಿಯ ಸಂಚಾಲಕರಾದ ಗೋಪಾಲಕೃಷ್ಣ ಭಟ್ ಮುಡೂರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶ್ಯಾಮಲ ಎ.ವಿ., ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗನ್ನಾಥ ಶೆಟ್ಟಿ ಉಬರಡ್ಕ, ಡಾ| ಜಯಪ್ರಸಾದ್ ಪಾರೆ, ಶಿಕ್ಷಕ ಸೀತಾರಾಮ, ಮುಖ್ಯೋಪಾಧ್ಯಾಯ ಗಿರಿಯಪ್ಪ ಸಾಲಿಯಾನ್ ಉಪಸ್ಥಿತರಿದ್ದರು.