ದುಗ್ಗಲಡ್ಕದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ ಮತ್ತು ಶ್ರೀಕೃಷ್ಣ ವೇಷ ಸ್ಪರ್ಧೆ

0

 

ದುಗ್ಗಲಡ್ಕದ ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳುಕೂಟ ದುಗ್ಗಲಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆಗಳು ದುಗ್ಗಲಡ್ಕ ಪ್ರೌಢಶಾಲಾ ವಠಾರದಲ್ಲಿ ಇಂದು ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಕುರಲ್ ತುಳುಕೂಟ ದ ಸಂಚಾಲಕ ಕೆ.ಟಿ.ವಿಶ್ವನಾಥ ವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉದ್ಯಮಿ ಶ್ರೀಕಾಂತ್ ಮಾವಿನಕಟ್ಟೆ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ನ.ಪಂ.ಸದಸ್ಯೆ ಶ್ರೀಮತಿ ಶಶಿಕಲಾ ನೀರಬಿದಿರೆ, ದುಗ್ಗಲಡ್ಕ ಪ್ರೌಢಶಾಲಾ ಮುಖ್ಯ ಶಿಕ್ಷಕ ಸುರೇಶ್ ಕುಮಾರ್ ಪಿ, ನಿವೃತ್ತ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಎ.ಯು., ಸಮಾಜರತ್ನ ಮಂಜುನಾಥ ಬಳ್ಳಾರಿ , ದುಗ್ಗಲಡ್ಕ ಪ್ರೌಢಶಾಲಾ ಶಿಕ್ಷಕ ಉನ್ನಿಕೃಷ್ಣ ಸಿ, ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ಶಿವಪ್ರಸಾದ್ ಬಿ.ಎನ್.,ಕು.ಪ್ರೀತಿಕಾ ಎಂ.ಎಸ್.ರವರನ್ನು ಹಾಗೂ ರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಅವನಿ ಎಂ.ಎಸ್.ಮೋಂಟಡ್ಕರವರನ್ನು ಸನ್ಮಾನಿಸಲಾಯಿತು. ಸನ್ಮಾನಿತರ ಬಗ್ಗೆ ರಮೇಶ್ ನೀರಬಿದಿರೆ ಮಾತನಾಡಿದರು‌.

ವೇದಿಕೆಯಲ್ಲಿ ಯುವಕ ಮಂಡಲದ ಅಧ್ಯಕ್ಷ ದಿನೇಶ ಮೂಡೆಕಲ್ಲು,ಕೋಶಾಧಿಕಾರಿ ಚಿದಾನಂದ ಕೊಯಿಕುಳಿ, ಕುರಲ್ ತುಳುಕೂಟದ ಕೋಶಾಧಿಕಾರಿ ಮನೋಜ್ ಪಾನತ್ತಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಗಾಯತ್ರಿ ಪ್ರಾರ್ಥಿಸಿದರು,ಯುವಕ ಮಂಡಲದ ಪೂರ್ವಾಧ್ಯಕ್ಷರಾದ ಭವಾನಿಶಂಕರ ಕಲ್ಮಡ್ಕ ಸ್ವಾಗತಿಸಿ, ಶೇಖರ ಕುದ್ಪಾಜೆ ವಂದಿಸಿದರು. ಕುರಲ್ ತುಳುಕೂಟದ ಕಾರ್ಯದರ್ಶಿ ನವ್ಯದಿನೇಶ್ ಕೊಯಿಕುಳಿ ಕಾರ್ಯಕ್ರಮ ನಿರೂಪಿಸಿದರು.