ಪಂಜದಲ್ಲಿ ಭಜನೋತ್ಸವ -ದೀಪ ಪ್ರಜ್ವಲನೆ

0

 

ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ

ಶ್ರೀ ಶಾರದಾಂಬಾ ಭಜನಾ ಮಂಡಳಿಯ ಪಂಜ,ಭಜನೋತ್ಸವ ಸಮಿತಿ ಇದರ ಆಶ್ರಯದಲ್ಲಿ ಆ.19 ರಂದು ಭಜನೋತ್ಸವ 2022 ಅರ್ಧ ಏಕಹ ಭಜನಾ ಕಾರ್ಯಕ್ರಮ ಸೂರ್ಯೋದಯದಿಂದ ಸೂರ್ಯಾಸ್ತಮಾನ ದವರೆಗೆ ಪಂಜ ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ಜರುಗಲಿದ್ದು ಮುಂಜಾನೆ ದೀಪ ಪ್ರಜ್ವಲನೆ ಕಾರ್ಯಕ್ರಮ ನಡೆಯಿತು. ಸಂಜೆ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಜರುಗಲಿದೆ.

 

ಆ.19 ರಂದು (ಇಂದು)ಮುಂಜಾನೆ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ರೈ ಅಗೋಳಿಬೈಲುಗುತ್ತು ದೀಪ ಪ್ರಜ್ವಲನೆ ಮಾಡಿದರು. ಭಜನೋತ್ಸವ ಸಮಿತಿ ಅಧ್ಯಕ್ಷ ಪ್ರಕಾಶ್ ಜಾಕೆ, ಕಾರ್ಯದರ್ಶಿ ವಾಚಣ್ಣ ಕೆರೆಮೂಲೆ,ಭಜನಾ ಮಂಡಳಿ ಅಧ್ಯಕ್ಷ ಬಾಲಕೃಷ್ಣ ಪುತ್ಯ, ಕಾರ್ಯದರ್ಶಿ ಗುರುಪ್ರಸಾದ್ ತೋಟ, ಭಜನೋತ್ಸವ ಸಮಿತಿಯ ಖಜಾಂಜಿ ರಾಜಕುಮಾರ್ ಬೇರ್ಯ, ಭಜನಾ ಪರಿಷತ್ ಪೂರ್ವಾಧ್ಯಕ್ಷ ವಿಶ್ವನಾಥ ರೈ ಅರ್ಗುಡಿ,ಭಜನಾ ಮಂಡಳಿ ಸದಸ್ಯರು, ವಿವಿಧ ಭಜನಾ ತಂಡದವರು, ಮೊದಲಾದವರು ಉಪಸ್ಥಿತರಿದ್ದರು.ಗುರುಪ್ರಸಾದ್ ತೋಟ ಸ್ವಾಗತಿಸಿದರು ಮತ್ತು ವಂದಿಸಿದರು.

*ಧಾರ್ಮಿಕ ಸಭಾ ಕಾರ್ಯಕ್ರಮ:* ಆ.19 ರಂದು (ಇಂದು)ಸಂಜೆ ಭಜನೋತ್ಸವ ಸಮಿತಿ ಅಧ್ಯಕ್ಷ ಪ್ರಕಾಶ್ ಜಾಕೆ ಸಭಾಧ್ಯಕ್ಷತೆ ವಹಿಸಲಿದ್ದಾರೆ.ಜಿ.ಪಂ.ಮಾಜಿ ಸದಸ್ಯ ಹರೀಶ್ ಕಂಜಿಪಿಲಿ,ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅತಿಥಿಗಳಾಗಿ ಭಾಗವಿಸಲಿದ್ದಾರೆ.