ದುಗ್ಗಲಡ್ಕ; ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಆಟೋಟ ಸ್ಪರ್ಧೆಗಳು

0

ಸಮಾರೋಪ ಮತ್ತು ಬಹುಮಾನ ವಿತರಣೆ

ದುಗ್ಗಲಡ್ಕದ ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳುಕೂಟ ದುಗ್ಗಲಡ್ಕ ಇದರ ಆಶ್ರಯದಲ್ಲಿ ರೋಟರ್ಯಾಕ್ಟ್ ಕ್ಲಬ್ ಇದರ ಸಹಯೋಗದೊಂದಿಗೆ ಶ್ರೀಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆಗಳು ದುಗ್ಗಲಡ್ಕ ಪ್ರೌಢಶಾಲಾ ವಠಾರದಲ್ಲಿ ನಡೆದು ಸಂಜೆ ಸಮರೋಪ ಮತ್ತು ಬಹುಮಾನ ವಿತರಣೆ ನಡೆಯಿತು.


ಕೊಯಿಕುಳಿ ಹಿ.ಪ್ರಾ.ಶಾಲಾ ಮುಖ್ಯ ಶಿಕ್ಷಕ ಮಾಧವ ಗೌಡ ಮೂಕಮಲೆ ಬಹುಮಾನ ವಿತರಿಸಿದರು.ನ.ಪಂ.ಸದಸ್ಯ ಬಾಲಕೃಷ್ಣ ರೈ ದುಗ್ಗಲಡ್ಕ, ಸುಳ್ಯ ರೋಟರ್ಯಾಕ್ಟ್ ಅಧ್ಯಕ್ಷ ಪುವೇಂದ್ರನ್ ಕೂಟೇಲು ಅತಿಥಿಗಳಾಗಿ ಭಾಗವಹಿಸಿದ್ದರು.ಸಭಾಧ್ಯಕ್ಷತೆಯನ್ನು ಕುರಲ್ ತುಳುಕೂಟದ ಕಾರ್ಯದರ್ಶಿ ನವ್ಯದಿನೇಶ್ ಕೊಯಿಕುಳಿ ಅಧ್ಯಕ್ಷತೆ ವಹಿಸಿದ್ದರು.ಕುರಲ್ ತುಳುಕೂಟದ ಸಂಚಾಲಕ ಡಾll ಕೆ.ಟಿ.ವಿಶ್ವನಾಥ,ಕೊಯಿಕುಳಿ ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಶಶಿಧರ ಎಂ.ಜೆ.,ಮಾಜಿ ನ.ಪಂ.ಅಧ್ಯಕ್ಷೆ ಶೀಲಾವತಿ ಮಾಧವ, ದುಗ್ಗಲಡ್ಕ ಅಂಗನವಾಡಿ ಕಾರ್ಯಕರ್ತೆ ಚಿತ್ರ ಪ್ರಶಾಂತ್,ಯುವಕ ಮಂಡಲದ ಅಧ್ಯಕ್ಷ ದಿನೇಶ್ ಕೊಯಿಕುಳಿ ಹಾಗೂ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.


ಕಾರ್ಯಕ್ರಮದಲ್ಲಿ ಕುರಲ್ ತುಳುಕೂಟದ ಕೋಶಾಧಿಕಾರಿ ಮನೋಜ್ ಪಾನತ್ತಿಲ ಸ್ವಾಗತಿಸಿ, ಯುವಕ ಮಂಡಲದ ಪೂರ್ವಾಧ್ಯಕ್ಷ ಶೇಖರ ಕುದ್ಪಾಜೆ ಬಹುಮಾನ ವಿಜೇತರ ಪಟ್ಟಿ ಓದಿದರು.ಭವಾನಿಶಂಕರ ಕಲ್ಮಡ್ಕ ವಂದಿಸಿದರು. ರಮೇಶ್ ನೀರಬಿದಿರೆ ಕಾರ್ಯಕ್ರಮ ನಿರೂಪಿಸಿದರು.