ಗುತ್ತಿಗಾರು : ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ

0

 

ಶ್ರೀ ಕೃಷ್ಣ ಭಜನಾ ಮಂದಿರ ಗುತ್ತಿಗಾರು ಮತ್ತು ಯುವಕ ಮಂಡಲ ಗುತ್ತಿಗಾರು ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಆ.18 ಗುತ್ತಿಗಾರು ಶ್ರೀ ಕೃಷ್ಣ ಭಜನಾ ಮಂದಿರದ ವಠಾರದಲ್ಲಿ ನಡೆಯಿತು. ಗುತ್ತಿಗಾರು ಗ್ರಾ.ಪಂ ಪಿಡಿಒ ಧನಪತಿ ಕಾರ್ಯಕ್ರಮ ಉದ್ಘಾಟಿಸಿದರು.

 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗುತ್ತಿಗಾರು ಯುವಕ ಮಂಡಲದ ಅಧ್ಯಕ್ಷ ಲೋಹಿತ್ ಚೈಪೆ ವಹಿಸಿದ್ದರು ವೇದಿಕೆಯಲ್ಲಿ ಗುತ್ತಿಗಾರು ವರ್ತಕರ ಸಂಘದ ಅಧ್ಯಕ್ಷ ಶಿವರಾಮ ಕರುವಜೆ, ಅಯ್ಯಪ್ಪ ಸೇವಾ ಸಮಿತಿಯ ಅಧ್ಯಕ್ಷ ಸುರೇಶ್ ಕಂದ್ರಪಾಡಿ, ಭಜನಾ ಮಂಡಳಿ ಅಧ್ಯಕ್ಷ ರವಿಪ್ರಕಾಶ್ ಉಪಸ್ಥಿತರಿದ್ದರು. ಅಚ್ಯುತ ಸ್ವಾಗತಿಸಿ ಪೂರ್ಣಚಂದ್ರ ಪೈಕ ವಂದಿಸಿದರು. ಕಿಶೋರ್ ಕುಮಾರ್ ಪೈಕ ಕಾರ್ಯಕ್ರಮ ನಿರೂಪಿಸಿದರು.


ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಕೃಷ್ಣ ಭಜನಾ ಮಂದಿರದ ಅಧ್ಯಕ್ಷ ರವಿಪ್ರಕಾಶ್ ಬಳ್ಳಡ್ಕ ವಹಿಸಿದ್ದರು. ವೇದಿಕೆಯಲ್ಲಿ ಗುತ್ತಿಗಾರು ಗ್ರಾ.ಪಂ. ಅಧ್ಯಕ್ಷ ರೇವತಿ ಅಚ್ಚಳ್ಳಿ, ಗ್ರಾ. ಪಂ. ಸದಸ್ಯ ಜಗದೀಶ್ ಬಾಕಿಲ, ನಿವೃತ್ತ ಯೋಧ ಜನಾರ್ಧನ ಆಜಡ್ಕ, ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಿನ್ಯಾಸ್ ಕೊಚ್ಚಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ನಿವೃತ್ತ ಯೋಧ ಮಹೇಶ್ ಕೊಪ್ಪತಡ್ಕ, ಅಮರ ಚಾರಿಟೇಬಲ್ ಟ್ರಸ್ಟ್‌ ಅಧ್ಯಕ್ಷ ಚಂದ್ರಶೇಖರ ಕಡೋಡಿ, ನಾಟಿವೈದ್ಯೆ ಗೌರವ ಡಾಕ್ಟರೇಟ್ ಪುರಸ್ಕೃತೆ ಡಾ। ವಿಜಯಲಕ್ಷ್ಮೀ ಕರುವಜೆ ಸನ್ಮಾನಿಸಲಾಯಿತು.
ಅಚ್ಚುತ ಗುತ್ತಿಗಾರು ಸ್ವಾಗತಿಸಿ ಸತೀಶ್ ಮೂಕಮಲೆ ವಂದಿಸಿದರು.
ಕಿಶೋರ್ ಕುಮಾರ್ ಪೈಕ ಕಾರ್ಯಕ್ರಮ ನಿರೂಪಿಸಿದರು.
ಅಷ್ಟಮಿ ಪ್ರಯುಕ್ತ ಪುರುಷರು ಮತ್ತು ಮಹಿಳೆಯರಿಗೆ ವಿವಿಧ ಸ್ಪರ್ಧೆಗಳು ನಡೆಯಿತು. ಮಕ್ಕಳಿಗೂ ವಿವಿಧ ಸ್ಪರ್ಧೆಗಳು ನಡೆದವು. ಚಿಕ್ಕ ಮಕ್ಕಳಿಗೆ ಕೃಷ್ಣ ವೇಷ ಸ್ಪರ್ಧೆ ನಡೆಯಿತು. ರಾತ್ರಿ ಗಂಟೆ 7 ರಿಂದ 12 ರ ತನಕ ಭಜನಾ ಕಾರ್ಯಕ್ರಮ ಜರಗಿತು. ಸಿದ್ಧಿಧಾತ್ರಿ ಭಜನಾ ಮಂಡಳಿ ನಂದನ ಕುಟುಂಬ ಮೆಟ್ಟಿನಡ್ಕ, ಶ್ರೀದೇವಿ ಭಜನಾ ಮಂಡಳಿ ಮೆಟ್ಟಿನಡ್ಕ ಸೇರಿದಂತೆ ಭಜನ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು.