ನಾಳೆ (ಆ. 21ರಂದು) ಭಗವತಿ ಯುವ ಸೇವಾ ಸಂಘದ ಆಶ್ರಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ

0

ಸುಳ್ಯದ ಭಗವತಿ ಯುವ ಸೇವಾ ಸಂಘದ ಆಶ್ರಯದಲ್ಲಿ 17ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯು ಬೂಡು ಬಂಟರ ಸಂಘದ ಸಭಾಂಗಣದಲ್ಲಿ ನಡೆಯುವುದು. ಬೆಳಗ್ಗೆ ಕಾರ್ಯಕ್ರಮದ ಉದ್ಘಾಟನೆ ನಡೆದು ಬಳಿಕ ಮಕ್ಕಳಿಗೆ, ಶಾಲಾ ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಸ್ಪರ್ಧೆಗಳು ನಡೆಯಲಿದೆ. ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ನಡೆಯುವುದು. ವಿಶೇಷವಾಗಿ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಅತ್ಯದಿಕ ಅಂಕ ಗಳಿಸಿದ ಬೂಡು, ಕೇರ್ಪಳ, ಕುರುಂಜಿ ಗುಡ್ಡೆ ಪರಿಸರದ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು.