ದೇವರಾಜು ಅರಸುರವರ 107 ನೇ ಜನ್ಮ ದಿನಾಚರಣೆ

0

ಸುಳ್ಯ ತಾಲೂಕು ಆಡಳಿತ,ತಾಲೂಕು ಪಂಚಾಯತ್,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸುಳ್ಯ ಇದರ ಆಶ್ರಯದಲ್ಲಿ ಹಿಂದುಳಿದ ವರ್ಗಗಳ ಧೀಮಂತ ನಾಯಕ, ಕರ್ನಾಟಕ ರಾಜ್ಯದ ಮಾಜಿ ಮುಖ್ಯ ಮಂತ್ರಿಗಳಾದ ದಿ| ಡಿ ದೇವರಾಜ ಅರಸುರವರ 107 ನೇ ಜನ್ಮದಿನಾಚರಣೆ ಕಾರ್ಯಕ್ರಮ ಕೊಡಿಯಾಲಬೈಲ್ ದೇವರಾಜು ಅರಸು ಭವನದಲ್ಲಿ ಅ.20 ರಂದು ನಡೆಯಿತು.


ಕಾರ್ಯಕ್ರಮವನ್ನು ಸಚಿವರಾದ ಎಸ್. ಅಂಗಾರ ಉದ್ಘಾಟಿಸಿದರು.
ಉಬರಡ್ಕ ಮಿತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಿತ್ರಕುಮಾರಿ ಅಧ್ಯಕ್ಷತೆ ವಹಿಸಿದ್ದರು.
ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಸುಳ್ಯ ತಹಶಿಲ್ದಾರ್ ಅನಿತಾಲಕ್ಷ್ಮಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್,ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ ಮಹದೇವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ‌ವಿದ್ಯಾರ್ಥಿನಿಯರ ಕರಾಟೆ ‌ಕವಾಯತ್ತು ಪ್ರದರ್ಶನ ನಡೆಯಿತು.