ಸುಬ್ರಹ್ಮಣ್ಯ ರೋಟರಿ ಕ್ಲಬ್  ವತಿಯಿಂದ ಸರ್ವೋತ್ತಮ ಸೇವಾ ಪ್ರಶಸ್ತಿ ವಿಜೇತ ಸುಬ್ಬಪ್ಪರಿಗೆ ಸನ್ಮಾನ

0

 

ರೋಟರಿ ಕ್ಲಬ್ ಸುಬ್ರಹ್ಮಣ್ಯ ವತಿಯಿಂದ ರಾಜ್ಯ ಸರಕಾರ ಕೊಡಮಾಡುವ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನರಾದ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದ ನೌಕರರಾದ ಸುಬ್ಬಪ್ಪ ಇವರನ್ನು ಆ.19 ರಂದು ಸನ್ಮಾನಿಸಲಾಯಿತು .

 

ಈ ಸಂದರ್ಭ ಸುಬ್ರಹ್ಮಣ್ಯ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಯು ಡಿ ಶೇಖರ್, ಎಸ್ ಎಸ್ ಪಿ ಯು ಕಾಲೇಜಿನ ಪ್ರಾಂಶುಪಾಲರಾದ ಸೋಮಶೇಖರ್, ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷರಾದ ಗೋಪಾಲ ಎಣ್ಣೆಮಜಲು, ನಿಕಟಪೂರ್ವ ಅಧ್ಯಕ್ಷರಾದ ವಿಜಯಕುಮಾರ್, ಕಾರ್ಯದರ್ಶಿ ರವಿ ಕಕ್ಕೆಪದವು, ಮತ್ತಿತರರು ಉಪಸ್ಥಿತರಿದ್ದರು . ನಾಗರಾಜ ಪರಮಲೆ ಸ್ವಾಗತಿಸಿ, ರಾಮಕೃಷ್ಣ ಮಲ್ಲಾರ ಕಾರ್ಯಕ್ರಮವನ್ನು ನಿರೂಪಿಸಿ
ಕುಟುಂಬ ಸಮ್ಮಿಲನ ಕಾರ್ಯಕ್ರಮ ನಡೆಯಿತು.