ಎಲಿಮಲೆ ಮಿತ್ರ ಬಳಗದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ

0

ಮಿತ್ರ ಬಳಗ ಎಲಿಮಲೆ ಇದರ ಆಶ್ರಯದಲ್ಲಿ 36ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳದಲ್ಲಿ ಆ.18ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಿತ್ರ ಬಳಗದ ಮಾಜಿ ಅಧ್ಯಕ್ಷರಾದ ಗಂಗಾಧರ ಕೇಪಳಕಜೆಯವರು ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಶ್ರೀಧರ ಗೌಡ ಕೆರೆಮೂಲೆ ಮುಖ್ಯ ಶಿಕ್ಷಕರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳ ಇವರು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಿಧನ ಹೊಂದಿದ ಬಳಗದ ಸದಸ್ಯರಾದ ಲಕ್ಷ್ಮೀನಾರಾಯಣ ಕಜೆ ಇವರಿಗೆ ನುಡಿನಮನ ಸಲ್ಲಿಸಲಾಯಿತು. ಈ ಕಾರ್ಯಕ್ರಮವನ್ನು ಬಳಗದ ಮಾಜಿ ಅಧ್ಯಕ್ಷರಾದ ಕಿರಣ್ ಗುಡ್ಡೆಮನೆ ನಡೆಸಿಕೊಟ್ಟರು. ದೀಕ್ಷಿತ್ ಚಿತ್ತಡ್ಕ ಸ್ವಾಗತಿಸಿದರು. ಓಂ ಪ್ರಸಾದ್ ಕಜೆ ವಂದಿಸಿದರು. ಹರಿಪ್ರಸಾದ್ ಬಿ.ವಿ. ಕಾರ್ಯಕ್ರಮ ನಿರೂಪಿಸಿದರು.
ಬಳಿಕ ವಿವಿಧ ಆಟೋಟ ಸ್ಪರ್ಧೆಗಳು ಜರಗಿದವು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮಿತ್ರ ಬಳಗದ ಅಧ್ಯಕ್ಷರಾದ ಉದಯ ಕುಮಾರ ಚಳ್ಳ ಅಧ್ಯಕ್ಷತೆ ವಹಿಸಿದ್ದರು. ಗಣರಾಜ್ ಭಟ್ ಕೆದಿಲ ಹಿಂದೂ ಜಾಗರಣ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ ಮಾತೃ ಸುರಕ್ಷಾ ಸಂಯೋಜಕರು ಇವರು ಧಾರ್ಮಿಕ ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ಜಯಪ್ರಸಾದ್ ಕುಚ್ಚಾಲ ಅಧ್ಯಕ್ಷರು ಶಾಲಾಭಿವೃದ್ದಿ ಸಮಿತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳ, ಇವರು ಭಾಗವಹಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಹರಿಪ್ರಸಾದ್ ಬಿ.ವಿ, ಬಳಗದ ಕಾರ್ಯದರ್ಶಿ ನಿತಿನ್ ಗಟ್ಟಿಗಾರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಉಪಾಧ್ಯಕ್ಷರಾದ ದೀಕ್ಷಿತ್ ಚಿತ್ತಡ್ಕ ಸ್ವಾಗತಿಸಿ, ಕಾರ್ಯದರ್ಶಿ ನಿತಿನ್ ಗಟ್ಟಿಗಾರು ವಂದಿಸಿದರು. ಕಿರಣ್ ಗುಡ್ಡೆಮನೆ ಕಾರ್ಯಕ್ರಮ ನಿರೂಪಿಸಿದರು.