ಕೇರ್ಪಳ ಶಾಲೆಯಲ್ಲಿ 30ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

0

ಸುಳ್ಯ ಕೇರ್ಪಳದ ಪಯಸ್ವಿನಿ ಯುವಕ ಮಂಡಲದ ಆಶ್ರಯದಲ್ಲಿ, ಕೇರ್ಪಳ ಶಾಲೆ ಹಾಗೂ ಕೇರ್ಪಳ – ಕುರುಂಜಿ – ಭಸ್ಮಡ್ಕ ಊರವರ ಸಹಯೋಗದಲ್ಲಿ 30 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಕೇರ್ಪಳ ಶಾಲಾ ವಠಾರದಲ್ಲಿ ನಡೆಯಿತು.

 

ಕಾರ್ಯಕ್ರಮವನ್ನು ಹಿರಿಯರಾದ ಕೇಶವ ಪಾರೆಪ್ಪಾಡಿ ನೆರವೇರಿಸಿದರು. ಯುವಕ ಮಂಡಲದ ಗೌರವಾಧ್ಯಕ್ಷ ಚಂದ್ರಶೇಖರ ಕೇರ್ಪಳ ಅಧ್ಯಕ್ಷ ವಹಿಸಿದ್ದರು. ನಗರ ಪಂಚಾಯತ್ ಸದಸ್ಯ ಸುಧಾಕರ ಕುರುಂಜಿಭಾಗ್, ಗಾಯಕ ಸುಭಾಷ್ ಡಿ.ಕೆ.ಮುಖ್ಯ ಅತಿಥಿಗಳಾಗಿದ್ದರು.
ಯುವಕ ಮಂಡಲದ ಕೋಶಾಧಿಕಾರಿ ವಿನಯ ಕೇರ್ಪಳ ವೇದಿಕೆಯಲ್ಲಿದ್ದರು.
ಯುವಕ ಮಂಡಲದ ಅಧ್ಯಕ್ಷ ಲಕ್ಷ್ಮೀಶ್ ದೇವರಕಳಿಯ ಸ್ವಾಗತಿಸಿದರು. ನಾರಾಯಣ ಶಿಲ್ಪಿ ವಂದಿಸಿದರು. ವಿನ್ಯಾಸ್ ಕುರುಂಜಿ ಕಾರ್ಯಕ್ರಮ ನಿರೂಪಿಸಿದರು.

ಉದ್ಘಾಟನೆ ಕಾರ್ಯಕ್ರಮ ಬಳಿಕ ಮುದ್ದು ಮಕ್ಕಳ ಕೃಷ್ಣ ವೇಷ ಸ್ಪರ್ಧೆ ನಡೆಯಿತು. ಬಳಿಕ ಮಕ್ಕಳಿಗೆ, ಶಾಲಾ ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಸ್ಪರ್ಧೆಗಳು ಆಯೋಜಿಸಲಾಯಿತು.