ಜಟ್ಟಿಪಳ್ಳ : ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ

0

ಸುಳ್ಯ ಜಟ್ಟಿಪಳ್ಳದ ಕಪಿಲ ಯುವಕ ಮಂಡಲ, ಮಾನಸ ಯುವತಿ ಮಂಡಲ, ಮಾನಸ ಮಹಿಳಾ ಮಂಡಲಗಳ ನೇತೃತ್ವದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಇಂದು ಬೆಳಿಗ್ಗೆ ಶುಭಾರಂಭಗೊಡಿತು.
ಜಟ್ಟಿಪಳ್ಳ ಸ.ಹಿ.ಪ್ರಾ.ಶಾಲಾ ವಠಾರದಲ್ಲಿ ಆಯೋಜಿತವಾಗಿರುವ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಭಾವನಾ ಸುಗಮ ಸಂಗೀತ ಬಳಗದ ಸಂಚಾಲಕರಾದ ನಿವೃತ್ತ ಪ್ರಾಂಶುಪಾಲ ಕೆ.ಆರ್.ಗೋಪಾಲಕೃಷ್ಣರು ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿದರು. ಕಪಿಲ ಯುವಕ ಮಂಡಲದ ಅಧ್ಯಕ್ಷ ಪ್ರದೀಪ್ ಜಟ್ಟಿಪಳ್ಳ ಸಭಾಧ್ಯಕ್ಷತೆ ವಹಿಸಿದ್ದರು. ಮಾನಸ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ರೇವತಿ ಗೋಪಾಲ್, ಎಸ್.ಡಿ.ಎಂ.ಸಿ. ಅಧ್ಯಕ್ಷ ಉಮೇಶ್ ಬೊಳಿಯಮಜಲು, ಕಪಿಲ ಯುವಕ ಮಂಡಲದ ಗೌರವಾಧ್ಯಕ್ಷ ವಿಶು ಕುಮಾರ್, ಯುವಜನ ಸಂಯುಕ್ತ ಮಂಡಳಿ ನಿರ್ದೇಶಕಿ ಶ್ರೀಮತಿ ನಮಿತಾ, ಕಾರ್ಗಿಲ್ ಬಾಯ್ಸ್ ಗೌರವಾಧ್ಯಕ್ಷ ಪ್ರಸಾದ್ ಜಟ್ಟಿಪಳ್ಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.

 


ಬಳಿಕ ಆರಂಭವಾದ ಮೊಸರು ಕುಡಿಕೆ ಕ್ರೀಡೆಗಳಿಗೆ ಕೆ.ಆರ್.ಗೋಪಾಲಕೃಷ್ಣರು ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು.