ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಯ ಪ್ರಮಾಣ ಪತ್ರ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ

0

ಭಾರತ್ ಸೇವಕ್ ಸಮಾಜದಿಂದ ಪ್ರವರ್ತಿತ ಬೆಳ್ಳಾರೆ ಮತ್ತು ಸುಳ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಯ 2021-22ನೇ ಸಾಲಿನ ವಿದ್ಯಾರ್ಥಿ ಶಿಕ್ಷಕಿಯರುಗಳ ಪ್ರಮಾಣ ಪತ್ರ ವಿತರಣೆ ಮತ್ತು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿ ಶಿಕ್ಷಕಿಯರುಗಳಿಗೆ ಪುರಸ್ಕಾರ ಸಮಾರಂಭ ಬೆಳ್ಳಾರೆಯ ಜ್ಞಾನದೀಪ ಸಂಸ್ಥೆ ಯಲ್ಲಿ ನಡೆಯಿತು .2021-22ನೇ ಸಾಲಿನ ಡಿಎಂಇಡಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಸೌಮ್ಯ ಮತ್ತು ಹರಿಣಾಕ್ಷಿ ಡಿ.ಜಿ ಅವರನ್ನು ಸಂಸ್ಥೆ ನಿರ್ದೇಶಕ ಉಮೇಶ್ ಮಣಿಕ್ಕಾರ ಸನ್ಮಾನಿಸಿದರು. ಶಿಕ್ಷಕಿ ಗೀತಾ ಬಾಲಚಂದ್ರ ಉಪಸ್ಥಿತರಿದ್ದರು. ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿ ಮೈಮೂನ ವಂದಿಸಿ .ಉಪನ್ಯಾಸಕ ಗಣೇಶ್ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು