ಕಲ್ಲೇರಿ : ಶ್ರೀ ಗಣೇಶ್ ಫ್ರೆಂಡ್ಸ್ ಸರ್ಕಲ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ

0


ಎಣ್ಮುರು ಗ್ರಾಮದ ಕಲ್ಲೇರಿಯಲ್ಲಿ ಶ್ರೀ ಗಣೇಶ್ ಫ್ರೆಂಡ್ಸ್ ಸರ್ಕಲ್ ವತಿಯಿಂದ 18 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ, ಆಟೋಟ ಸ್ಪರ್ಧೆಗಳು ಆ. 21 ರಂದು ಸಂಘದ ವಠಾರದಲ್ಲಿ ನಡೆಯಿತು.


ಅಧ್ಯಕ್ಷ ರಾಮಕೃಷ್ಣ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸೇವಕರಾದ ವಾಸುದೇವ ಅಲೆಂಗಾರ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮುರುಳ್ಯ ಹಾಲು ಸೊಸೈಟಿ ಅಧ್ಯಕ್ಷ ಅಶೋಕ್‌ಕುಮಾರ್ ಊರುಸಾಗು, ಎಡಮಂಗಲ ಪಂಚಾಯತ್ ಉಪಾಧ್ಯಕ್ಷೆ ರೇವತಿ ಎಣ್ಮೂರು, ಸದಸ್ಯರಾದ ಮಾಯಿಲಪ್ಪ ಗೌಡ ಎಣ್ಮೂರು ಪಟ್ಟೆ, ಕಾರ್ಯದರ್ಶಿ ವಿನಯ ಕಲ್ಲೇರಿ ಉಪಸ್ಥಿತರಿದ್ದರು.
ಪುರುಷರಿಗೆ, ಮಹಿಳೆಯರಿಗೆ, ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿದ್ದರು. ಕಾರ್ತಿಕ್ ರೈ ಕಲ್ಲೇರಿ ಸ್ವಾಗತಿಸಿ, ವಂದಿಸಿದರು. ಪ್ರದೀಪ್ ರೈ ಎಣ್ಮೂರು ಕಾರ್ಯಕ್ರಮ ನಿರೂಪಿಸಿದರು.