ದೊಡ್ಡತೋಟ ಶ್ರೀರಾಮ ಭಜನಾ ಮಂದಿರದಲ್ಲಿ 15ನೇ ವರ್ಷದ ಕೃಷ್ಣ ಜನ್ಮಾಷ್ಟಮಿ ಆಚರಣೆ

0

 

 

ದೊಡ್ಡತೋಟ ಶ್ರೀ ರಾಮ ಭಜನಾ ಮಂದಿರದ ವತಿಯಿಂದ 15ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವು ಆ.21ರಂದು ದೊಡ್ಡತೋಟ ಭಜನಾ ಮಂದಿರದ ವಠಾರದಲ್ಲಿ ನಡೆಯಿತು.

ಮುಂಜಾನೆ ಮಂದಿರದಲ್ಲಿ ಗಣಹೋಮ ನಡೆಯಿತು. ಬಳಿಕ 5 ವರ್ಷದೊಳಗಿನ ಮಕ್ಕಳಿಗೆ ಮುದ್ದುವೇಷ ಕೃಷ್ಣ ವೇಷ ಸ್ಪರ್ಧೆ ನಡೆಯಿತು. ಬಳಿಕ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆದು, ಸಂಜೆ 5 ಗಂಟೆಗೆ ಬಹುಮಾನ ವಿತರಣೆ ನಡೆಯಿತು.ಕಾರ್ಯಕ್ರಮದಲ್ಲಜ ನೂರಾರು ಸಾರ್ವಜನಿಕರು ಪಾಲ್ಗೊಂಡರು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.