ಜಯನಗರ : ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ

0

 

ಜಯನಗರ ಕೊರಂಬಡ್ಕ ಶ್ರೀ ನಾಗಬ್ರಹ್ಮ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನ, ಶ್ರೀ ಗುಳಿಗ ದೈವ ಹಾಗೂ ಶ್ರೀ ಕೊರಗಜ್ಜನ ದೈವಸ್ಥಾನದ ವಠಾರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಇಂದು ನಡೆಯಿತು.

ಬೆಳಿಗ್ಗೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಿತು. ಶ್ರೀ ನಾಗಬ್ರಹ್ಮ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನಗಳ ಗುಳಿಗ ದೈವ ಹಾಗೂ ಕೊರಗಜ್ಜ ದೈವಸ್ಥಾನ ಕೊರಂಬಡ್ಕ ಇದರ ಆಡಳಿತ ಸಮಿತಿ ಅಧ್ಯಕ್ಷ ಕೇಶವ ಸಿ.ಎ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮಕ್ಕಳಿಗೆ ಮುದ್ದು ಕೃಷ್ಣವೇಷ ಸ್ಪರ್ಧೆ ಹಾಗೂ ಮಹಿಳೆಯರಿಗೆ, ಪುರುಷರಿಗೆ ವಿವಿಧ ಸ್ಪರ್ಧೆಗಳು ನಡೆಯಿತು.

ಸಂಜೆ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು.


ಸಮಿತಿ ಅಧ್ಯಕ್ಷ ಕೇಶವ ಸಿ.ಎ. ಯವರು ಅಧ್ಯಕ್ಷತೆ ವಹಿಸಿದ್ದರು. ಮರ್ಕಂಜ ಅನ್ನಪೂರ್ಣೆಶ್ವರಿ ಕ್ಷೇತ್ರ ಯೋಗೀಶ್ವರ ಸಿದ್ಧ ಮಠದ ರಾಜೇಶ್ ನಾಥರವರು ಧಾರ್ಮಿಕ ಉಪನ್ಯಾಸ ನೀಡಿದರು. ಕ್ಯಾಂಪ್ಕೋ ನಿರ್ದೇಶಕ ಕೃಷ್ಣಪ್ರಸಾದ್ ಮಡ್ತಿಲ, ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಿ.ಕೆ. ಉಮೇಶ್, ನಗರ ಪಂಚಾಯಿತಿ ನಾಮನಿರ್ದೇಶಿತ ಸದಸ್ಯ ರೋಹಿತ್ ಕೊಯಿಂಗೋಡಿ, ನಗರ ಪಂಚಾಯತ್ ಸದಸ್ಯೆ ಶ್ರೀಮತಿ ಶಿಲ್ಪಾ ಸುದೇವ್, ಶ್ರೀ ನಾಗಬ್ರಹ್ಮ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನದ ಸಂಚಾಲಕ ಜಿ. ಜಗನ್ನಾಥ, ಜಯನಗರ ಶ್ರೀ ಗಜಾನನ ಭಜನಾ ಮಂದಿರದ ಅಧ್ಯಕ್ಷ ಮಾಧವ ಪಾಟಾಳಿ , ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ನಳಿನಿ, ಮಂಜು ಮೇಸ್ತ್ರಿ ಬಳ್ಳಾರಿಯವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಅಡುಗೆಯವರಾದ ಭವಾನಿಪ್ರಸಾದ್ ಜಯನಗರರವರನ್ನು ಸನ್ಮಾನಿಸಲಾಯಿತು. ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಿತು.
ಮೋಹನ್ ಹೊಸಗದ್ದೆ ಸ್ವಾಗತಿಸಿದರು. ಜನಾರ್ದನ ಜಯನಗರ ಕಾರ್ಯಕ್ರಮ ನಿರೂಪಿಸಿದರು.