ದೇವ : 32 ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

0

 

ಗೆಳೆಯರ ಬಳಗ ದೇವ, ಜ್ಯೋತಿಲಕ್ಷ್ಮಿ ಮಹಿಳಾಮಂಡಲ ದೇವ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ದೇವ, ಅಂಗನವಾಡಿ ಬೆಂಬಲ ಸಮಿತಿ ದೇವ, ದೇವಚಳ್ಳ. ಇವುಗಳ ಜಂಟಿ ಆಶ್ರಯದಲ್ಲಿ ಆ. 18ರಂದು 32 ನೇ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆಯನ್ನು ಮಾಡಲಾಯಿತು.

ಊರಿನ ಹಿರಿಯರಾದ ಅಪ್ಪು ಬೆಳ್ಚಪ್ಪಾಡರವರು ದೀಪ ಬೆಳಗಿಸುದರ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ನೀಡಿ ಶುಭ ಹಾರೈಸಿದರು.

ಶ್ರೀಕೃಷ್ಣಜನ್ಮಾಷ್ಟಮಿ ಆಚರಣೆ ಪ್ರಯುಕ್ತ ಪುರುಷರಿಗೆ ಮೊಸರು ಕುಡಿಕೆ, ಜಾರುಕಂಬ ಮಹಿಳೆಯರಿಗೆ, ಶಾಲಾ ಮಕ್ಕಳಿಗೆ, ಸಾರ್ವಜನಿಕ ಶಾಲಾ ಮಕ್ಕಳಿಗೆ, ಸ್ಪರ್ಧಾಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು, ವಿಷೇಶವಾಗಿ 5 ವರ್ಷದ ಒಳಗಿನ ಸಾರ್ವಜನಿಕ ಮಕ್ಕಳಿಗೆ ಶ್ರೀಕೃಷ್ಣ ವೇಷ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಮದ್ಯಾಹ್ನ ಶ್ರೀಮತಿ ಹರಿಣಿ ಪುತ್ತೂರಯ ಪ್ರಾಮ್ ಸುಪಾಲರು ನೆಹರು ಮೆಮೊರಿಯಲ್ ಕಾಲೇಜು ಸುಳ್ಯ ಇವರು ಧಾರ್ಮಿಕ ಉಪನ್ಯಾಸ ನೀಡಿದರು. ಸಂಜೆ ನಡೆದ ಸಮಾರೋಪ ಸಮಾರಂಭದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೆಳೆಯರ ಬಳಗದ ಅಧ್ಯಕ್ಷರಾದ ಯೋಗೀಶ್ ದೇವ ರವರು ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಗ್ರಾಮಪಂಚಾಯತ್ ಅಧ್ಯಕ್ಷರಾದ ಸುಲೋಚನಾ ದೇವ, ಪಂಚಾಯತ್ ಸದಸ್ಯರಾದ ರಮೇಶ ಪಡ್ಪು, ಭವಾನಿಶಂಕರ ಮುಂಡೋಡಿ, ಪ್ರಗತಿ ಪರ ಕೃಷಿಕರಾದ ವಸಂತ ಕುಮಾರ ಬೊಳ್ಳಜೆ, ಜ್ಯೋತಿಲಕ್ಷ್ಮಿ ಮಹಿಳಾಮಂಡಲದ ಅಧ್ಯಕ್ಷರಾದ ಕವಿತಾ ಜನಾರ್ದನ ಕುತ್ಯಾಳ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಯ ಮುಖ್ಯ ಗುರುಗಳಾದ ಜಯಪ್ರಕಾಶ್ ಮುತ್ಲಾಜೆ ಗೆಳೆಯರ ಬಳಗದ ಕಾರ್ಯದರ್ಶಿ ಉಮೇಶ್ ದೇವ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಲತಾ, ಮೊತಿಲಾಲ್ ಓಸ್ವಾಲ್ ಸುಳ್ಯ ಇದರ ಮಾಲಕರದ ಮೋಹಿತ್ ನರ್ಪ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ದೇವ ಶಾಲೆಯಲ್ಲಿ 1ರಿಂದ 5 ತರಗತಿಯವರೆಗೆ ಕಲಿತು 2021/ 2022 ರ. ಹತ್ತನೆ ಮತ್ತು ದ್ವೀತಿಯ ಪಿ ಯು ಸಿ ಯಲ್ಲಿ 500 ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಸ್ಪರ್ಧಾಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತ ರದವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಎ ಪಿ ಎಂ ಸಿ ಮಾಜಿ ಅಧ್ಯಕ್ಷರಾದ ವಿನಾಯಕುಮಾರ ಮುಳುಗಾಡು, ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಕಿಶೋರ್ ಕುಮಾರ್ ಅಂಬೆಕಲ್ಲು, ದೇವಚಳ್ಳ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷರಾದ ದಿವಾಕರ ಮುಂಡೋಡಿ, ಧರ್ಮಸ್ಥಳ ಗ್ರಾಮಭಿರುದ್ಧಿ ಯೋಜನೆಯ ದೇವ ಒಕ್ಕೂಟ ಅಧ್ಯಕ್ಷರಾದ ನಳಿನಾಕ್ಷ ಹಿರಿಯಡ್ಕ,ಊರಿನ ಹಿರಿಯರು,ಗೆಳೆಯರ ಬಳಗದ ಮಾಜಿ,ಹಾಲಿ ಪದಾಧಿಕಾರಿಗಳು ಸರ್ವ ಸದಸ್ಯರುಗಳು, ಜ್ಯೋತಿಲಕ್ಷ್ಮಿ ಮಹಿಳಾ ಮಂಡಲದ ಮಾಜಿ, ಹಾಲಿ ಪದಾಧಿಕಾರಿಗಳು ಸರ್ವ ಸದಸ್ಯರು, ಪಂಚಾಯತ್ ಮಾಜಿ ಸದಸ್ಯರು ಉಪಸ್ಥಿತರಿದ್ದರು. ಭಾಗವಹಿಸಿದ ಎಲ್ಲರಿಗೂ ಮದ್ಯಾಹ್ನ ಭೋಜನದ ವ್ಯವಸ್ಥೆಯನ್ನು ಮಾಡಲಾಗಿತ್ತು. ಕಾರ್ಯಕ್ರಮವನ್ನು ಕಾರ್ತಿಕ್ ದೇವ ನಿರೂಪಿಸಿದರು ಮುಕುಂದ ಹಿರಿಯಡ್ಕ ಸ್ವಾಗತಿಸಿ,ಉಮೇಶ್ ದೇವ ವಂದಿಸಿದರು.