ಅಗ್ನಿಶಾಮಕ, ಈಜು ತಜ್ಞರು ಕಾರ್ಯಾಚರಣೆ ನಡೆಸಿದರೂ ಪತ್ತೆಯಾಗದ ಶವ
ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನ ಘಟ್ಟದಲ್ಲಿ ಮುಳುಗಿ ಯುವಕ ಕಾಣೆಯಾಗಿದ್ದು 2 ದಿನ ಕಳೆದರೂ ಇನ್ನೂ ಪತ್ತೆಯಾಗಿಲ್ಲ. ಅಗ್ನಿಶಾಮಕ, ಈಜು ತಜ್ಞರು ನಿನ್ನೆಯಿಂದಲೇ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟದಲ್ಲಿ ಆ.21ರಂದು ನೀರಲ್ಲಿ ಮುಳುಗಿದ ಮಂಡ್ಯದ ಯುವಕ ಶಿವು ಅವರ ದೇಹ ಇನ್ನೂ ಪತ್ತೆಯಾಗಿಲ್ಲ.
ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ನಿನ್ನೆ ಮೂರು ಗಂಟೆ ಹುಡಿಕಿದರೂ ದೇಹ ಕಂಡುಬರಲಿಲ್ಲ.
ಮಳೆ ಹಾಗೂ ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಕಾರಣ ಹಾಗೂ ನೀರಿನ ಬಣ್ಣ ಕಂದು ಬಣ್ಣಕ್ಕೆ ತಿರುಗಿದ ಕಾರಣ ಕಾರ್ಯಾಚರಣೆಗೆ ಅಡ್ಡಿ ಆಗಿದೆ.
ನಾಳೆ ಬೆಳಿಗ್ಗೆಯಿಂದಲೇ ಮತ್ತೆ ಶಿವು ಅವರಿಗಾಗಿ ಹುಡುಕಾಟ ಕಾರ್ಯಾಚರಣೆ ಪ್ರಾರಂಭವಾಗಲಿದೆ ಎಂದು ತಿಳಿದುಬಂದಿದೆ.