ಆ‌.31 : ಮುಕ್ಕೂರಿನಲ್ಲಿ ಗಣೇಶೋತ್ಸವ ಕ್ರೀಡಾಕೂಟ, ಸಮ್ಮಾನ ಸಮಾರಂಭ

0

 

ಕುಂಡಡ್ಕ-ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 13 ನೇ ವರ್ಷದ ಗಣೇಶೋತ್ಸವ ಕ್ರೀಡಾಕೂಟ, ಸಮ್ಮಾನ ಸಮಾರಂಭ ಆ.31 ರಂದು ಮುಕ್ಕೂರಿನಲ್ಲಿ ನಡೆಯಲಿದೆ.

ಪ್ರಗತಿಪರ ಕೃಷಿಕ ಗಣಪತಿ ಭಟ್ ನೀರ್ಕಜೆ ದೀಪ ಬೆಳಗಿಸಲಿದ್ದಾರೆ. ಪ್ರಗತಿಪರ ಕೃಷಿಕ ವನಶ್ರೀ ಕೆ.ಗಣಪಯ್ಯ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಎಸ್.ಅಂಗಾರ ಸಮ್ಮಾನ ನೆರವೇರಿಸಲಿದ್ದಾರೆ. ಶ್ರೀ ಧರ್ಮಸ್ಥಳ ಗ್ರಾ.ಯೋ.ಬಿ.ಸಿ.ಟ್ರಸ್ಟ್ ದ.ಕ.ಜಿಲ್ಲೆ- 2 ನಿರ್ದೇಶಕ ಪ್ರವೀಣ್ ಕುಮಾರ್, ಮಡಿಕೇರಿ ನಗರಸಭೆ ಮಾಜಿ ಅಧ್ಯಕ್ಷ ನಂದಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಕೃಷಿ ಕ್ಷೇತ್ರದ ಸಾಧಕಿ ಶ್ರೀಮತಿ ಶ್ವೇತಾ ಕಾನಾವು ಅವರಿಗೆ ಸಮ್ಮಾನ ನೆರವೇರಲಿದೆ.
ಅಂಗನವಾಡಿ, ಪ್ರಾಥಮಿಕ, ಪ್ರೌಢ, ಕಾಲೇಜು, ಸಾರ್ವಜನಿಕ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿದೆ.