ಕನಕಮಜಲು: ಕೋಡಿ ತಿರುವಿನಲ್ಲಿ ಕಾರು – ಲಾರಿ ಅಪಘಾತ

0

 

ಕಾರು ಚಾಲಕನ ಕಾಲಿಗೆ ಗಂಭೀರ ಗಾಯ

ಕಾರು ಹಾಗೂ ಲಾರಿ ಮಧ್ಯೆ ಪರಸ್ಪರ ಢಿಕ್ಕಿ ಸಂಭವಿಸಿ, ಕಾರು ಚಾಲಕನಿಗೆ ಗಂಭೀರ ಗಾಯವಾದ ಘಟನೆ ಕನಕಮಜಲು ಗ್ರಾಮದ ಕೋಡಿ ಎಂಬಲ್ಲಿ ಆ.23ರಂದು ಬೆಳಿಗ್ಗೆ ಸಂಭವಿಸಿದೆ.

 

ಪುತ್ತೂರಿನಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಕಾರು ಕನಕಮಜಲಿನ ಕೋಡಿ ಎಂಬಲ್ಲಿ ದೊಡ್ಡ ತಿರುವಿನ ಬಳಿ ತಲುಪುತ್ತಿದ್ದಂತೆ ಸುಳ್ಯ ಕಡೆಯಿಂದ ಬಂದ ಲಾರಿಗೆ ಢಿಕ್ಕಿ ಹೊಡೆದಿದ್ದು, ಕಾರು ಚಾಲಕನ ಕಾಲಿಗೆ ಗಂಭೀರವಾಗಿ ಗಾಯವಾಗಿದೆ ತಿಳಿದುಬಂದಿದೆ.
ಸ್ಥಳೀಯರು ಸೇರಿ ಗಾಯಾಳುವನ್ನು ಸುಳ್ಯದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.