ಸುಳ್ಯ ನಗರ ಪಂಚಾಯತ್ನ ಪೌರ ಕಾರ್ಮಿಕನಾಗಿ ದುಡಿಯುತ್ತಿದ್ದ ಚಂದ್ರಶೇಖರ ಎಂಬವರು ಅಸೌಖ್ಯದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಅವರಿಗೆ ಸುಮಾರು ೩೫ ವರ್ಷ ವಯಸ್ಸಾಗಿತ್ತು. ವಾರದ ಹಿಂದೆ ಅಸೌಖ್ಯಕ್ಕೊಳಗಾಗಿದ್ದ ಅವರು ವಿಶ್ರಾಂತಿಗೆಂದು ಕಾವುನಲ್ಲಿರುವ ತನ್ನ ಸಹೋದರಿಯ ಮನೆಗೆ ತೆರಳಿದ್ದರು. ಅಲ್ಲಿ ನಿನ್ನೆ ರಾತ್ರಿ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ.