ಸುಳ್ಯ ಯುವಜನ ಸಂಯುಕ್ತ ಮಂಡಳಿ ಮತ್ತು ಅಮ್ಮ ಚಿಣ್ಣರ ಮನೆ ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ

0

ಸುಳ್ಯ ಯುವಜನ ಸಂಯುಕ್ತ ಮಂಡಳಿ ಮತ್ತು ಅಮ್ಮ ಚಿಣ್ಣರ ಮನೆ ಇದರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮುದ್ದುಕೃಷ್ಣ ಮುದ್ದು ರಾಧಾ ಸ್ಪರ್ಧೆ ಆ.೨೧ ರಂದು ಯುವ ಸದನ ಸಭಾಂಗಣದಲ್ಲಿ ನಡೆಯಿತು.

ಅಮ್ಮ ಚಿಣ್ಣರ ಮನೆಯ ಹಿರಿಯ ವಿದ್ಯಾರ್ಥಿಗಳಾದ ಮನ್ವಿತ್ ಅಡ್ಪಂಗಾಯ ಮತ್ತು ಭೂಮಿಕಾ ವಿ.ಕೆ. ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆಯನ್ನು ಅಮ್ಮ ಚಿಣ್ಣರ ಮನೆಯ ಪೋಷಕ ಸಮಿತಿ ಅಧ್ಯಕ್ಷ ಬ್ರಿಜೇಶ್ ಕುದ್ಪಾಜೆ ವಹಿಸಿದ್ದರು. ಸುಳ್ಯ ಮೊಸರು ಕುಡಿಕೆ ಉತ್ಸವ ಸಮಿತಿಯ ಅಧ್ಯಕ್ಷ ಹರೀಶ್ ಉಬರಡ್ಕ, ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಗೌರವಾಧ್ಯಕ್ಷ ಅನಿಲ್ ಪೂಜಾರಿಮನೆ, ದೊಡ್ಡಣ್ಣ ಬರೆಮೇಲು ಉಪಸ್ಥಿತರಿದ್ದರು. ಶೈಲೇಶ್ ಅಂಬೆಕಲ್ಲು ಸ್ವಾಗತಿಸಿದರು. ಪ್ರಸನ್ನ ಐವರ್ನಾಡು ಕಾರ್ಯಕ್ರಮ ನಿರೂಪಿಸಿದರು.