ಬೆಳ್ಳಾರೆ ಸ್ನೇಹಿತರ ಕಲಾ ಸಂಘದ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ೨೪ ನೇ ವರ್ಷದ ಮೊಸರು ಕುಡಿಕೆ ಕಾರ್ಯಕ್ರಮವು ಬೆಳ್ಳಾರೆ ಶಾಲಾ ಕ್ರೀಡಾಂಗಣದಲ್ಲಿ ಆಗಸ್ಟ್೨೧ ೨ ನಡೆಯಿತು. ಬೆಳಿಗ್ಗೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ಉದಯಕುಮಾರ ಉಪಾದ್ಯಾಯ ಇವರು ದೀಪ ಬೆಳಗಿಸಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.
ಬಳಿಕ ಮುದ್ದುಕೃಷ್ಣ ಸ್ಪರ್ದೆ, ವಿವಿದ ಕ್ರೀಢಾ ಸ್ಪರ್ದೆಗಳು ನಡೆದವು ಅಪರಾಹ್ನ ೨ ರಿಂದ ಸಭಾ ಮತ್ತು ಸನ್ಮಾನ ಕಾರ್ಯಕ್ರಮ ಸಂಘದ ಅದ್ಯಕ್ಷರಾದ ಸಂಜಯ್ ನೆಟ್ಟಾರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು ರೋಟರಿ ವಿದ್ಯಾ ಸಂಸ್ಥೆಯ ನಿವೃತ್ತ ಮುಖ್ಯೋಪಾದ್ಯಾಯ ಅಚ್ಚುತ ಅಟ್ಲೂರು ಇವರಿಗೆ ಗುರುರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.