ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ತಾಲೂಕು ಮಾಹಿತಿ ಕೇಂದ್ರದ ವತಿಯಿಂದ ಸರಕಾರಿ ಪದವಿಪೂರ್ವ ಕಾಲೇಜು ಗಾಂಧಿನಗರದ ವಿದ್ಯಾರ್ಥಿಗಳಿಗೆ ಸರಕಾರದಿಂದ ಸಿಗುವ ಸವಲತ್ತಿನ ಕುರಿತು ತಾಲೂಕು ಮಾಹಿತಿ ಕೇಂದ್ರದ ಸಿಬ್ಬಂದಿ ಕಮಾಲ್ ರವರು ಮಾಹಿತಿ ನೀಡಿದರು.
ಅದೇ ರೀತಿ ಬ್ಯಾಂಕ್ ಖಾತೆಗೆ ಅಧಾರ್ ಎನ್.ಪಿ.ಸಿ ಐ ಪೋರ್ಟಲ್ ನಲ್ಲಿ ಪ್ರತಿಯೊಂದು ವಿದ್ಯಾರ್ಥಿಗಳು ಜೋಡನೆ ಮಾಡಲೇ ಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾಲೇಜು ಪ್ರಾಂಶುಪಾಲರಾದ ಸಮದ್ ಹಾಗೂ ಉಪನ್ಯಾಸಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.