ಅಟೋರಿಕ್ಷಾ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ, ಬೈಕ್ ಸವಾರರಿಬ್ಬರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಕನಕಮಜಲಿನಲ್ಲಿ ಆ.26ರಂದು ಸಂಜೆ ಸಂಭವಿಸಿದೆ.
ಕನಕಮಜಲಿನ ಗಣೇಶ ಎಂಬವರು ತಮ್ಮ ಅಟೋರಿಕ್ಷಾವನ್ನು ಸೊಸೈಟಿ ಕಡೆಗೆ ತಿರುಗಿಸುವ ವೇಳೆ ಹಿಂಬದಿಯಿಂದ ಬಂದ ಬೈಕ್ ಅಟೋರಿಕ್ಷಾಕ್ಕೆ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರರಿಬ್ಬರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಘಟನೆಯಲ್ಲಿ ಬೈಕ್ ನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ರಿಕ್ಷಾ ಕೂಡಾ ಜಖಂಗೊಂಡಿದೆ.