ಬಳ್ಪ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಬ್ರಹ್ಮಣ್ಯ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಆ.26 ರಂದು ನಡೆಯಿತು.
ಬಳಿಕ ಅವರು ಮಾತನಾಡಿ”ಮಕ್ಕಳು ಸರ್ವತೋಮುಖ ಅಭಿವೃದ್ಧಿಗೆ ಇಂತಹ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಅತ್ಯಗತ್ಯ ಮಕ್ಕಳ ಪ್ರತಿಭೆಯನ್ನು ಗುರತಿಸಿ ಹೊರತರಲು ಕಾರ್ಯಕ್ರಮಗಳು ನಡೆಯಬೇಕು” ಎಂದು ಹೇಳಿದರು., ಎಸ್.ಡಿ.ಎಂ.ಸಿ ಅಧ್ಯಕ್ಷ ಉಮೇಶ್ ಬುಡೆಂಗಿ ಸಭಾಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಣ ಸಂಯೋಜಕಿ ಶ್ರೀಮತಿ ಸಂಧ್ಯಾಕುಮಾರಿ ಪ್ರಾಸ್ತಾವಿಕ ಗೈದರು. ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ನೇತ್ರಾವತಿ ಹೊಪ್ಪಾಳೆ, ಎಸ್. ಡಿ.ಎಂ.ಸಿ ಉಪಾಧ್ಯಕ್ಷೆ ಶ್ರೀಮತಿ ಭವ್ಯ , ಶಿಕ್ಷಣ ಸಂಯೋಜಕ ವಸಂತ ಏನೇಕಲ್ಲು, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಗಿರಿಜಾ ಕೆ, ಪಂಚಾಯತ್ ಸದಸ್ಯೆ ಶ್ರೀಮತಿ ಶೈಲಜಾ, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಸುಬ್ರಹ್ಮಣ್ಯ, ಶಿಕ್ಷಕ ಸಂಘದ ಪ್ರತಿನಿಧಿಗಳಾದ ಶ್ರೀಮತಿ ಅಂಬಿಕಾ ಹಾಗೂ ಶ್ರೀಮತಿ ಸರೋಜಿನಿ, ಉಪಸ್ಥಿತರಿದ್ದರು.
ಶಾಲೆಗೆ ಉತ್ತಮ ಸಂಘಟನೆಗಾಗಿ ಇಲಾಖೆವತಿಯಿಂದ ಅಭಿನಾಂದನಾ ಪತ್ರ ನೀಡಿ ಗೌರವಿಸಲಾಯಿತು.