ಆ.31: ಅರಂಬೂರು ಮೂಕಾಂಬಿಕಾ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಹಾಗೂ ಗಣೇಶೋತ್ಸವ

0

 

ಅರಂಬೂರು ಶ್ರೀ ಮೂಕಾಂಬಿಕಾ ಭಜನಾ ಮಂದಿರದಲ್ಲಿ ಆ.31 ರಂದು ಶ್ರೀ ಕೃಷ್ಣ ಜನ್ಮಾಷ್ಠಮಿ ಹಾಗೂ ಶ್ರೀ ಗಣೇಶೋತ್ಸವವು ನಡೆಯಲಿರುವುದು.
ಬೆಳಗ್ಗೆ ಪುರೋಹಿತರ ನೇತೃತ್ವದಲ್ಲಿ ಗಣಪತಿ ಹವನವಾಗಿ ಶ್ರೀ ಗಣೇಶ ಮೂರ್ತಿ ಪ್ರತಿಷ್ಠೆಯು ನೆರವೇರಲಿದೆ. ಬಳಿಕ ಪೂಜೆಯಾಗಿ ಭಜನಾ ಕಾರ್ಯಕ್ರಮ ನಡೆಯಲಿದ್ದು ಮಧ್ಯಾಹ್ನ ಮಹಾಪೂಜೆ ನಡೆದು ಪ್ರಸಾದ ವಿತರಣೆಯಾಗಿ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿರುವುದು.ಸಂಜೆ ಗಂಟೆ 6.30 ರಿಂದ ಬಲೆ ತೆಲಿಪಾಲೆ ಖ್ಯಾತಿ ಯ ಪರಿಚಯ ಕಲಾವಿದರಿಂದ ನಾಟಕ ಪ್ರದರ್ಶನ ವಾಗಲಿರುವುದು.ನಂತರ ಸ್ಥಳೀಯ ಕಲಾವಿದರಿಂದ ಮನರಂಜನಾ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ಗಂಟೆ 8.30 ರಿಂದ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ನಡೆದ ವಿವಿಧ ಅಟೋಟ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆಯಾಗಲಿರುವುದು. ಬಳಿಕ ಮಹಾಪೂಜೆಯಾಗಿ ಪ್ರಸಾದ ವಿತರಣೆಯಾಗಿ ಶ್ರೀ ಗಣೇಶನ ವೈಭವದ ಶೋಭಾಯಾತ್ರೆಯು ಮಂದಿರದ ಬಳಿಯಿಂದ ಹೊರಟು ಪ್ರಮುಖ ಬೀದಿಗಳಲ್ಲಿ ಸಾಗಿ ಬಂದು ಪಯಸ್ವಿನಿ ನದಿಯಲ್ಲಿ ‌ಜಲಸ್ಥಂಭನವಾಗಲಿದೆ ಎಂದು ಸಂಘಟಕರು ತಿಳಿಸಿರುತ್ತಾರೆ.