ಸುಳ್ಯ ಚೆನ್ನಕೇಶವ ದೇವಸ್ಥಾನದಲ್ಲಿ 54 ನೇ ವರ್ಷದ ಗಣೇಶೋತ್ಸವದ ಪ್ರಯುಕ್ತ ವಿವಿಧ ಸ್ಪರ್ಧೆಗಳು

0

 

 

ಸುಳ್ಯ ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ ,ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಇದರ ಆಶ್ರಯದಲ್ಲಿ ಆ.31 ರಿಂದ ಸೆ.4 ರ ತನಕ ನಡೆಯಲಿರುವ 54 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಆ.28 ರಂದು ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ಮಕ್ಕಳಿಗೆ ಹಾಗೂ ಸಾರ್ವಜನಿಕ ಮಾತೆಯರಿಗೆ ವಿವಿಧ ಅಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.

 

ಬೆಳಗ್ಗೆ ಸಿದ್ಧಿವಿನಾಯಕ ಸೇವಾ ಸಮಿತಿ ಅಧ್ಯಕ್ಷ ಉಮೇಶ್ ಪಿ.ಕೆ ,ದೇವತಾರಾಧನಾ ಸಮಿತಿ ಅಧ್ಯಕ್ಷ ಕೆ.ಸೋಮನಾಥ , ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಲತಾ ಮಧುಸೂದನ್ ಹಾಗೂ ಸಮಿತಿ ಪದಾಧಿಕಾರಿಗಳು ದೀಪ ಪ್ರಜ್ವಲಿಸಿ ಸ್ಪರ್ಧೆಗಳಿಗೆ ಚಾಲನೆ ನೀಡಿದರು. ಮಕ್ಕಳಿಗೆ ಕನ್ನಡ ದುಂಡಕ್ಷರ ಸ್ಪರ್ಧೆ, ಬಲೂನ್ ಊದುವುದು, ಬಕೆಟಿಗೆ ಚೆಂಡು ಎಸೆಯುವುದು, ಗಣಪತಿ ಚಿತ್ರ ಬಿಡಿಸುವುದು, ಹಣತೆ ಉರಿಸುವುದು,‌ಭಕ್ತಿಗೀತೆ, ಚೇಳಿನ ಓಟ, ಗೋಣಿ ಚೀಲ ಓಟ, ಸಮೂಹ ಗೀತೆ, ಸಂಗೀತ ಕುರ್ಚಿ, ಚೀಟಿ ಎತ್ತಿ ಅಭಿನಯ ಹಾಗೂ ವಿಶೇಷ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಸಮಿತಿಯ ಪದಾಧಿಕಾರಿಗಳು ಹಾಗೂ ‌ಸದಸ್ಯರು ಸಹಕರಿಸಿದರು.