ಗಣೇಶೋತ್ಸವದ ಪ್ರಯುಕ್ತ ಪಂಜದಲ್ಲಿ ಚಿತ್ರಕಲಾ ಸ್ಪರ್ಧೆ

0

 

ಪಂಜ ಪರಿಸರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ ಆ.28.ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇಗುಲದ ವಠಾರದಲ್ಲಿ ಜರುಗಿತು. ಎಲ್ ಕೆ ಜಿ-ಯು ಕೆ ಜಿ ವಿದ್ಯಾರ್ಥಿಗಳಿಗೆ ಐಚ್ಚಿಕ, 2ರಿಂದ 4 ತರಗತಿ ವಿದ್ಯಾರ್ಥಿಗಳಿಗೆ ಪರಿಸರ, 5ರಿಂದ 7 ತರಗತಿ ವಿದ್ಯಾರ್ಥಿಗಳಿಗೆ ಗಣಪತಿ, 8ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಗಣೇಶೋತ್ಸವ , ಸಾರ್ವಜನಿಕರಿಗೆ ಸ್ವಚ್ಛ ಪ್ರಕೃತಿ ವಿಷಯದಲ್ಲಿ ಚಿತ್ರಕಲಾ ಸ್ಪರ್ಧೆ ಜರುಗಿದ್ದು ನೂರಕ್ಕೂ ಮಿಕ್ಕಿ ಸ್ಪರ್ಧಿಗಳು ಪಾಲ್ಗೊಂಡಿದ್ದರು.