ಅಡ್ಕಾರು: ಅಂಜನಾದ್ರಿ ಶ್ರೀ ಪ್ರಸನ್ನಾಂಜನೇಯ ಕ್ಷೇತ್ರದಲ್ಲಿ ಸೋಣ ಶನಿವಾರ ಪ್ರಯುಕ್ತ ಬಲಿವಾಡು ಕೂಟ

0

 

ಕನಕಮಜಲು ಪ್ರಾ.ಕೃ.ಪ.ಸ.ಸಂಘದ ವತಿಯಿಂದ ಗೋದಾಮು ಕಟ್ಟಡ ನಿರ್ಮಾಣದ ಪ್ರಯುಕ್ತ ವಿಶೇಷ ಪ್ರಾರ್ಥನೆ

ಜಾಲ್ಸೂರು ಗ್ರಾಮದ ಅಡ್ಕಾರು ಅಂಜನಾದ್ರಿಯ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ಹಾಗೂ ಗುಳಿಗರಾಜ ಕ್ಷೇತ್ರದಲ್ಲಿ ಸೋಣ ಶನಿವಾರ ಪ್ರಯುಕ್ತ ಬಲಿವಾಡು ಕೂಟ, ಭಜನಾ ಸೇವೆ ಹಾಗೂ ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಅಡ್ಕಾರಿನಲ್ಲಿ ನಿರ್ಮಾಣಗೊಂಡಿರುವ ನೂತನ ಗೋದಾಮು ಕಟ್ಟಡದ ಪ್ರಯುಕ್ತ ವಿಶೇಷ ಪ್ರಾರ್ಥನೆಯು ಆ.27ರಂದು ಜರುಗಿತು.


ಕ್ಷೇತ್ರದ ಪ್ರಧಾನ ಅರ್ಚಕ ಬ್ರಹ್ಮಶ್ರೀ ವೇ. ಮೂ. ಪುರೋಹಿತ ನಾಗರಾಜ ಭಟ್ ಅವರ ನೇತೃತ್ವದಲ್ಲಿ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿಗೆ ಪೂಜೆ, ಅಡೂರಿನ ಶ್ರೀ ಪ್ರಿಯಾ ಭಜನಾ ಮಂಡಳಿಯವರಿಂದ ಭಜನಾ ಸೇವೆ, ಮಧ್ಯಾಹ್ನ ಅನ್ನಸಂತರ್ಪಣೆ ಜರುಗಿತು.


ಈ ಸಂದರ್ಭದಲ್ಲಿ ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಕಾಟೂರು, ಉಪಾಧ್ಯಕ್ಷ ನಾರಾಯಣ ಬೊಮ್ಮೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುಮಾರ್ ಕುದ್ಕುಳಿ, ಸಹಕಾರಿ ಸಂಘದ ನಿರ್ದೇಶಕರುಗಳು, ಸಿಬ್ಬಂದಿ ವರ್ಗದವರು, ಶ್ರೀ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಶಿವರಾಮ ರೈ ಕುರಿಯಗುತ್ತು, ಪ್ರಧಾನ ಕಾರ್ಯದರ್ಶಿ ಮಹಾಲಿಂಗ ಮಣಿಯಾಣಿ ಅಡ್ಕಾರುಪದವು, ಖಜಾಂಜಿ ಜಯಂತ ಗೌಡ ಅಡ್ಕಾರು ಸೇರಿದಂತೆ ಶ್ರೀ ಕ್ಷೇತ್ರದ ವಿವಿಧ ಸಮಿತಿಯ ಪದಾಧಿಕಾರಿಗಳು ಹಾಗೂ ನೂರಾರು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು.


ರಾತ್ರಿ ಕುಕ್ಕುಜಡ್ಕದ ಸಮರ್ಪಣಾ ಮಹಿಳಾ ಭಜನಾ ಮಂಡಳಿಯವರಿಂದ ಭಜನಾ ಸೇವೆ, ಮಹಾಪೂಜೆ, ಅನ್ನಸಂತರ್ಪಣೆ ಜರುಗಿತು.