ಆದಿಚುಂಚನಗಿರಿಯಿಂದ ಹೊರಟ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ

0

 

ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರಿಂದ ಚಾಲನೆ : ಹಲವು ಗಣ್ಯರ ಉಪಸ್ಥಿತಿ

 

ಮಂಗಳೂರಿನ ಬಾವುಟ ಗುಡ್ಡದಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತಿರುವ ಸಂಘಟನಾ ಚತುರ, ಸ್ವಾತಂತ್ರ್ಯ ಸಮರವೀರ ಕೆದಂಬಾಡಿ ರಾಮಯ್ಯಗೌಡರವರ ಆದಿಚುಂಚನಗಿರಿಯಿಂದ ಹೊರಟಿದ್ದು ಪ್ರತಿಮೆ ಪುರಪ್ರವೇಶಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಜಗದ್ಗುರು ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಚಾಲನೆ ನೀಡಿದರು.


ಈ ಕಾರ್ಯಕ್ರಮದಲ್ಲಿ ಪ್ರಸನ್ನನಾಥ ಸ್ವಾಮೀಜಿ, ಧರ್ಮಪಾಲನಾಥ ಸ್ವಾಮೀಜಿ, ನಾಗಮಂಗಲ ಶಾಸಕ ಸುರೇಶ್ ಗೌಡ, ಪುತ್ತೂರು ಶಾಸಕ ಸಂಜೀವ ಮಠಂದೂರು, ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ವಿ, ದಕ್ಷಿಣ ಕನ್ನಡ ಜಿಲ್ಲೆಯ ಯುವ ಒಕ್ಕಲಿಗರ ಸಂಘದ ಅಧ್ಯಕ್ಷ ಅಕ್ಷಯ್ ಕೆ ಸಿ, ಸ್ವತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉತ್ಸವ ಸಮಿತಿ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು ಸಹಿತಹಲವು ಗಣ್ಯರು, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೊಡಗು ಜಿಲ್ಲೆಯ ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು.