ಸುಳ್ಯ ಮೊಸರು ಕುಡಿಕೆ ಉತ್ಸವಕ್ಕೆ ಸಚಿವ ಎಸ್.ಅಂಗಾರ ರವರಿಂದ ಚಾಲನೆ

0

 

 

ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ಆಯೋಜಿಸಿದ 9 ನೇ ವರ್ಷದ ಮೊಸರು ಕುಡಿಕೆ ಉತ್ಸವಕ್ಕೆ ಮೀನುಗಾರಿಕೆ ಬಂದರು ಒಳನಾಡು ಜಲಸಾರಿಗೆ ಸಚಿವ ಎಸ.ಅಂಗಾರ ರವರು ಕೇಸರಿ ಧ್ವಜ ಹಾರಾಡಿಸುವ ಮೂಲಕ ಚಾಲನೆ ನೀಡಿದರು. ಶ್ರೀ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ ತೆಂಗಿನಕಾಯಿ ಒಡೆದು ಶೋಭಾಯಾತ್ರೆಗೆ ಶುಭ ಹಾರೈಸಿದರು. ಮುಖ್ಯ ಅಭ್ಯಾಗತರಾಗಿ ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮೊಸರು ಕುಡಿಕೆ ಉತ್ಸವ ಸಮಿತಿ ಮಾಜಿ ಅಧ್ಯಕ್ಷ ಗೋಪಾಲ ಕೃಷ್ಣ ಕರೋಡಿ,ದೊಡ್ಡಣ್ಣ ಬರೆಮೇಲು,ಉತ್ಸವ ಸಮಿತಿ ಅಧ್ಯಕ್ಷ ಹರೀಶ್ ರೈ ಉಬರಡ್ಕ , ವಿ.ಹೆಚ್.ಪಿ.ಅಧ್ಯಕ್ಷ ಸೋಮಶೇಖರ ಪೈಕ, ಬಜರಂಗದಳ ಜಿಲ್ಲಾ ಸಂಚಾಲಕ ಲತೀಶ್ ಗುಂಡ್ಯ, ಕಾರ್ಯದರ್ಶಿ ಪ್ರಕಾಶ್ ಯಾದವ್ ಸುಳ್ಯ, ಖಜಾಂಜಿ ರಂಜಿತ್ ಸುಳ್ಯ ಹಾಗೂ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.