ಕಾಂಗ್ರೆಸ್ ನೇತೃತ್ವ : ಜಾಲ್ಸೂರಿನಿಂದ ಸುಳ್ಯದವರೆಗೆ ಸ್ವಾತಂತ್ರ್ಯ ನಡಿಗೆ ಆರಂಭ

0

 

ಹಿರಿಯರಾದ ಕೇಪು ಸುಂದರ ಗೌಡ, ಹಾಜಿ ಇಸಾಕ್ ಸಾಹೇಬ್, ಪಾಜಪಳ್ಳ, ಮಾರ್ಟಿನ್ ಕ್ರಾಸ್ತರಿಂದ ಚಾಲನೆ

ರೈ, ಸೊರಕೆ, ಖಾದರ್ ಸಹಿತ ಹಲವು ಗಣ್ಯರ ಉಪಸ್ಥಿತಿ

ಸ್ವಾತಂತ್ರ್ಯದ ಅಮೃತಮಹೋತ್ಸವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯಾದ್ಯಂತ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಇಂದು ಜಾಲ್ಸೂರಿನಿಂದ ಸುಳ್ಯಕ್ಕೆ ನಡಿಗೆ ಆರಂಭಗೊಂಡಿದೆ.


ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮರ ಅಧ್ಯಕ್ಷ ತೆಯಲ್ಲಿ ನಡೆದ ನಡಿಗೆಗೆ ಹಿರಿಯರಾದ ಕೇಪು ಸುಂದರ ಗೌಡ, ಹಾಜಿ ಇಸಾಕ್ ಸಾಹೇಬ್ ಪಾಜಪಳ್ಳ,ಮಾರ್ಟಿನ್ ಕ್ರಾಸ್ತರು ಬೆಲೂನ್ ನನ್ನು ಹಾರಿಸುವುದರ ಮೂಲಕ ಚಾಲನೆ ನೀಡಿದರು.

ಮಾಜಿ ಸಚಿವ ರಮಾನಾಥ ರೈ, ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ.ಖಾದರ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಶಾಸಕ ಶಕುಂತಳಾ ಶೆಟ್ಟಿ, ಕಾವು ಹೇಮನಾಥ ಶೆಟ್ಟಿ, ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ,
ಕೆ.ಪಿ.ಸಿ.ಸಿ. ಮಾಜಿ ಸದಸ್ಯರುಗಳಾದ ಭರತ್ ಮುಂಡೋಡಿ, ಎಂ.ವೆಂಕಪ್ಪ ಗೌಡ, ಟಿ.ಎಂ. ಶಹೀದ್, ಬ್ಲಾಕ್ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ರಾಜೀವಿ ಆರ್ ರೈ, ಸೋಮಶೇಖರ ಕೊಯಿಂಗಾಜೆ, ಕೃಷ್ಣಪ್ಪ ಜಿ, ಡಾ.ರಘು ಬಿ,ಡಿಸಿಸಿ ಉಪಾಧ್ಯಕ್ಷ ಎನ್.ಜಯಪ್ರಕಾಶ್ ರೈ, ಬ್ಲಾಕ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ್, ತಾಲೂಕು ಇಂಟೆಕ್ ಅಧ್ಯಕ್ಷ ಶಾಫಿ ಕುತ್ತಮೊಟ್ಟೆ, ಯೂತ್ ಕಾಂಗ್ರೆಸ್ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಎನ್.ಎಸ್.ಯು.ಐ. ಅಧ್ಯಕ್ಷ ಕೀರ್ತನ್ ಕೊಡಪಾಲ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಜಾಥಾ ಕಾರ್ಯಕ್ರಮದ ಜಾಲ್ಸೂರು ಉಸ್ತುವಾರಿ ಸದಾನಂದ ಮಾವಜಿ, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಜ್ಯ ಕಾರ್ಯದರ್ಶಿ ಅಬೂಸಾಲಿ ಗೂನಡ್ಕ ಸಹಿತ ಹಲವು ಮಂದಿ ಹೆಜ್ಜೆ ಹಾಕಿದರು.