ಸುಳ್ಯ 54 ನೇ ವರ್ಷದ ಶ್ರೀ ಗಣೇಶೋತ್ಸವದ ಉತ್ಸವಕ್ಕೆ ಡಾ.ಚಿದಾನಂದ ರವರಿಂದ ಚಾಲನೆ

0

ಸುಳ್ಯ ಸಿದ್ಧಿವಿನಾಯಕ ಸೇವಾ ಸಮಿತಿ, ಸಾರ್ವಜನಿಕ ದೇವತಾರಾಧನಾ ಸಮಿತಿ ಆಶ್ರಯದಲ್ಲಿ ಆ.31 ರಿಂದ ಸೆ.4 ರ ತನಕ ಶ್ರೀ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ 54 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಪ್ರಯುಕ್ತ ಬೆಳಗ್ಗೆ ಪುರೋಹಿತ್ ಆದಿನಾರಾಯಣ ರವರ ನೇತೃತ್ವದಲ್ಲಿ ಗಣಪತಿ ಹವನವಾಗಿ ,ಗಣಪತಿ ಮೂರ್ತಿಯ ಪ್ರತಿಷ್ಠೆ ನೆರವೇರಿಸಿದರು.

ಬಳಿಕ ಸ್ವಾತಂತ್ರ್ಯ ವೀರ ಸಾವರ್ಕರ್ ವೇದಿಕೆಯಲ್ಲಿ ನಡೆದ ಸಮಾರಂಭದಲ್ಲಿ ಉತ್ಸವಕ್ಕೆ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ರವರು ದೀಪ ಪ್ರಜ್ವಲಿಸಿ ಚಾಲನೆ ನೀಡಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಸಾ.ದೇ.ಸ. ಅಧ್ಯಕ್ಷ ಸೋಮನಾಥ ಕೆ. ಅಧ್ಯಕ್ಷತೆ ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ಭಾರತ್ ಆಗ್ರೋ ಸರ್ವಿಸಸ್ ಮತ್ತು ಸಪ್ಲೈಸ್ ಇದರ ಮಾಲಕರಾದ ರೋ| ಪಿ.ರಾಮಚಂದ್ರ, ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ, ‌ಸಾ.ದೇ.ಸ.ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಲತಾ ಮಧುಸೂದನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕು.ವೈಷ್ಣವಿ ಪ್ರಾರ್ಥಿಸಿದರು. ಸಾ.ದೇ.ಸ.ಪ್ರಧಾನ ಕಾರ್ಯದರ್ಶಿ ಎಂ.ಜೆ.ಶಶಿಧರ ಕೊಯಿಕುಳಿ ಸ್ವಾಗತಿಸಿ, ವಂದಿಸಿದರು. ಜಂಟಿ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಸಹಕರಿಸಿದರು.