ಅರಂಬೂರು ಮೂಕಾಂಬಿಕಾ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ, ಗಣೇಶೋತ್ಸವ

0

ಅರಂಬೂರು ಶ್ರೀ ಮೂಕಾಂಬಿಕಾ ಭಜನಾ ಮಂದಿರದಲ್ಲಿ ಇಂದು ಶ್ರೀ ಕೃಷ್ಣ ಜನ್ಮಾಷ್ಠಮಿ ಹಾಗೂ 36 ನೇ ವರ್ಷದ ಶ್ರೀ ಗಣೇಶೋತ್ಸವ ವು ಬೆಳಗ್ಗೆ ಪುರೋಹಿತ ಕೃಷ್ಣ ಭಟ್ ಇಡ್ಯಡ್ಕ ಮತ್ತು ಅಭಿರಾಮ್ ಭಟ್ ಸರಳಿಕುಂಜ ರವರ ನೇತೃತ್ವದಲ್ಲಿ ಗಣಪತಿ ಹವನದೊಂದಿಗೆ ಆರಂಭಗೊಂಡಿತು.

ಬಳಿಕ ಗಣಪತಿ ಮೂರ್ತಿಯ ಪ್ರತಿಷ್ಠಾ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಮಂದಿರದ ಗೌರವಾಧ್ಯಕ್ಷ ಬಿ.ಶ್ರೀಪತಿ ಭಟ್ ಮಜಿಗುಂಡಿ, ಅಧ್ಯಕ್ಷ. ರತ್ನಾಕರ ರೈ, ಕಾರ್ಯದರ್ಶಿ ಪ್ರೀತಿಕ್ ಕುಲಾಲ್ ಹಾಗೂ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.