ಯೇನೆಕಲ್ಲಿನ ಆದಿಶಕ್ತಿ ಭಜನಾ ಮಂದಿರದಲ್ಲಿ ಶ್ರೀ ಗಣೇಶೋತ್ಸವ

0

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಯೇನೆಕಲ್ಲು ಇದರ ಆಶ್ರಯದಲ್ಲಿ 15ನೇ ವರ್ಷದ ಶ್ರೀ ಗಣೇಶೋತ್ಸವ ಆ. 31 ಮತ್ತು ಸೆ. 1ರಂದು ಯೇನೆಕಲ್ಲಿನ ಬಾಲಾಡಿ ಶ್ರೀ ಆದಿಶಕ್ತಿ ಭಜನಾ ಮಂದಿರದಲ್ಲಿ ನಡೆಯಲಿದೆ.

ಆ. 31ರಂದು ಗಣಪತಿ ಹೋಮ, ಗಣೇಶನ ವಿಗ್ರಹ ಪ್ರತಿಷ್ಠಾಪನೆ ನಡೆಯಿತು. ಸಂಜೆ ಗಂಟೆ 6.00ರಿಂದ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಸೆ‌ 1ರಂದು ಮಧ್ಯಾಹ್ನ 12.00ರಿಂದ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ. ಅಪರಾಹ್ನ 2.00 ಗಂಟೆಯಿಂದ ಭಜನೆಯೊಂದಿಗೆ ಶೋಭಾಯಾತ್ರೆ ನಡೆದು ಗಣೇಶನ ವಿಸರ್ಜನೆ ನಡೆಯಲಿದೆ.