ಸುಬ್ರಹ್ಮಣ್ಯ ಐನೆಕಿದು ಪ್ರಾ.ಕೃ.ಪ.ಸ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಕುಜುಂಬಾರು ಅವರಿಗೆ ಬೀಳ್ಕೊಡುಗೆ

0

ಸುಬ್ರಹ್ಮಣ್ಯ ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಕುಜುಂಬಾರು ಸೇವಾ ನಿವೃತ್ತಿ ಹೊಂದಿದ್ದು ಅವರನ್ನು ಸಂಘದ ವತಿಯಿಂದ ಆ.30 ರಂದು ಬೀಳ್ಕೊಡಲಾಯಿತು.


ಸುಬ್ರಹ್ಮಣ್ಯ ಐನೆಕಿದು ಪ್ರಾ.ಕೃ.ಪ.ಸ ಸಂಘದ ಅಧ್ಯಕ್ಷರಾದ ಜಯಪ್ರಕಾಶ್ ಕೂಜುಗೋಡು, ಉಪಾಧ್ಯಕ್ಷರಾದ ಮಾಧವ.ಡಿ, ಮಾಜಿ ಅಧ್ಯಕ್ಷರು ಹಾಗೂ ನಿರ್ದೇಶಕರಾದ ಸೋಮಸುಂದರ ಕೂಜುಗೋಡು, ಮಾಜಿ ಅಧ್ಯಕ್ಷರು ಹಾಗೂ ನಿರ್ದೇಶಕರಾದ ರವೀಂದ್ರ ಕುಮಾರ್ ರುದ್ರಪಾದ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಕಾಶ್.ಕೆ, ಸಂಸ್ಥೆಯ ಸ್ಥಾಪಕ ಅಧ್ಯಕ್ಷರ ಮಗ ಕಿಶೋರ್ ಕುಮಾರ್ ಕೂಜುಗೋಡು ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪ್ರಾ.ಕೃ.ಪ.ಸ ಸಂಘದ ಎಲ್ಲಾ ನಿರ್ದೇಶಕರುಗಳು, ಸಿಬ್ಬಂದಿಗಳು ಹಾಗೂ ಉಮೇಶ್ ಕಜ್ಜೋಡಿ ಉಪಸ್ಥಿತರಿದ್ದರು.