ಇಂದು ಸಂಜೆ ಉಬರಡ್ಕ ಗಣೇಶೋತ್ಸವದಲ್ಲಿ ಪಟ್ಲ ಸತೀಶ್ ಶೆಟ್ಟಿ ತಂಡದಿಂದ ಯಕ್ಷ-ನಾಟ್ಯ-ವೈಭವ

0

ಶ್ರೀ ನರಸಿಂಹ ಶಾಸ್ತಾವು ದೇವಾಲಯ, ಸಾರ್ವಜನಿಕ ಶ್ರೀ ದೇವತಾರಾಧನ ಸಮಿತಿ ಉಬರಡ್ಕ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಶ್ರೀ ನರಸಿಂಹ ಶಾಸ್ತಾವು ದೇವಾಲಯದ ಸಭಾಂಗಣದಲ್ಲಿ ಸಂಜೆ 6.30 ಕ್ಕೆ ಯಕ್ಷದ್ರುವ ಪಟ್ಲ ಸತೀಶ್ ಶೆಟ್ಟಿ ತಂಡದಿಂದ ಸ್ವರ ಯಕ್ಷ -ನಾಟ್ಯ – ವೈಭವ ನಡೆಯಲಿದೆ. ನಂತರ ಡಿ ಯುನೈಟೆಡ್ ಡಾನ್ಸ್ ಸ್ಟುಡಿಯೋ ಸುಳ್ಯ ಇವರಿಂದ ನೃತ್ಯ ವೈಭವ ನಡೆಯಲಿರುವುದು.