ಸತೀಶ್ ಕೂಜುಗೋಡು ಕಾಂಗ್ರೆಸ್‌ಗೆ ರಾಜೀನಾಮೆ

0

ಕಡಬ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ, ಎ.ಪಿ.ಎಂ.ಸಿ ಮಾಜಿ ಅಧ್ಯಕ್ಷ ಸತೀಶ್ ಕೂಜುಗೋಡು ಕಾಂಗ್ರೆಸ್ ಸದಸ್ಯತನಕ್ಕೆ ಮತ್ತು ಪಕ್ಷದ ಹುದ್ದೆಗೆ ರಾಜೀನಾಮೆ ಸಲ್ಲಿಸಿರುವುದಾಗಿ ವರದಿಯಾಗಿದೆ.

ಸುಬ್ರಹ್ಮಣ್ಯ – ಐನೆಕಿದು ಪ್ರಾ.ಕೃ.ಪ.ಪ.ಸ. ಸಂಘದ ನಿರ್ದೇಶಕ ಚುನಾವಣೆ ಸಂದರ್ಭದಲ್ಲಿ ಐನೆಕಿದು ಗ್ರಾಮ ಕಾಂಗ್ರೆಸ್ ಸಮಿತಿಯ ಅಭ್ಯರ್ಥಿಯನ್ನು ಗಣನೆಗೆ ತೆಗೆದು ಕೊಂಡಿಲ್ಲ ಎಂಬ ಕಾರಣದಿಂದ ರಾಜಿನಾಮೆ ಸಲ್ಲಿಸಿರುವುದಾಗಿದೆ ತಿಳಿದುಬಂದಿದೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ರಾಜಿನಾಮೆ ಸಲ್ಲಿಸಿರುವುದಾಗಿ ಸತೀಶ್ ಕೂಜುಗೋಡು ತಿಳಿಸಿದ್ದಾರೆ.