ಆಲೆಟ್ಟಿ ಸದಾಶಿವ ದೇವಸ್ಥಾನದಲ್ಲಿ ಶ್ರಾವಣ ಶನಿವಾರ ಬಲಿವಾಡು ಕೂಟ

0

ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಶ್ರಾವಣ ಶನಿವಾರದ ಪ್ರಯುಕ್ತ ಬಲಿವಾಡು ಕೂಟವು ಜರುಗಿತು. ಬೆಳಗ್ಗೆ ಶ್ರೀ ದೇವರಿಗೆ ಅರ್ಚಕ ಹರ್ಷಿತ್ ಬನ್ನಿಂತಾಯ ರವರ ನೇತೃತ್ವದಲ್ಲಿ ನಿತ್ಯ ಪೂಜೆಯಾಗಿ ವಿಶೇಷವಾಗಿ ಶನಿವಾರ ಪೂಜೆಯು ಸೇವಾರೂಪದಲ್ಲಿ ನಡೆಯಿತು. ಮಧ್ಯಾಹ್ನ ಮಹಾಪೂಜೆಯಾಗಿ ಪ್ರಸಾದ ವಿತರಣೆಯಾಗಿ ಸಾರ್ವಜನಿಕ ಅನ್ನ ಸಂತರ್ಪಣೆಯಾಯಿತು.

ದೇವಸ್ಥಾನದ ಅನುವಂಶಿಕ ಮೊಕ್ತೇಸರರ ಪೈಕಿ ಶ್ರೀಪತಿ ಬೈಪಡಿತ್ತಾಯ, ವ್ಯ.ಸ.ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ, ಸೇವಾ ಸಮಿತಿ ಅಧ್ಯಕ್ಷ ಪುರುಷೋತ್ತಮ ಕೋಲ್ಚಾರು, ಜೀ.ಸ.ಅಧ್ಯಕ್ಷ ಎನ್.ಎ.ರಾಮಚಂದ್ರ, ವ್ಯ.ಸ.ಮಾಜಿ ಅಧ್ಯಕ್ಷ ಪ್ರಸನ್ನ ಕೆ.ಸಿ.ಬಡ್ಡಡ್ಕ, ಭಜನಾ ಸಂಘದ ಅಧ್ಯಕ್ಷ ಅಚ್ಚುತ ಮಣಿಯಾಣಿ ಆಲೆಟ್ಟಿ ಹಾಗೂ ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.ಶ್ರಾವಣ ಮಾಸದ ಮುಂದಿನ ಎರಡು ಶನಿವಾರದಂದು ಬಲಿವಾಡು ವೃತಾಚರಣೆಯು ನಡೆಯಲಿರುವುದು. ಮುಂದಿನ ಪ್ರತಿ ಶನಿವಾರದಂದು ದೇವಳದಲ್ಲಿ ಶನಿಪೂಜೆ ಹಾಗೂ ಅನ್ನ ಸಂತರ್ಪಣೆಯು ನಡೆಯಲಿರುವುದಾಗಿ ಅಧ್ಯಕ್ಷರು ತಿಳಿಸಿರುತ್ತಾರೆ.