ಬಳ್ಪ: ಕಾಂಜಿ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಆಮಂತ್ರಣ ಪತ್ರ ಬಿಡುಗಡೆ

0

ಬಳ್ಪ ಗ್ರಾಮದ ಕಾಂಜಿ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಹಾ ನವರಾತ್ರಿ ಉತ್ಸವ ಸೆ. 26ರಿಂದ ಅ. 5 ರ ತನಕ ಜರಗಲಿದ್ದು, ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಸೆ. 3ರಂದು ಶ್ರೀ ತ್ರಿಶೂಲಿನೀ ಅಮ್ಮನವರ ಸನ್ನಿಧಿಯಲ್ಲಿ ನಡೆಯಿತು.
ಶ್ರೀಮತಿ ರತ್ನಮಾಲ ಕೃಷ್ಣಪ್ಪ ಪೂಜಾರಿ ಕಾಂಜಿ ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು.ಧಾರ್ಮಿಕ ಉತ್ಸವ ಸಮಿತಿ ಗೌರವಾಧ್ಯಕ್ಷ ಭಾಸ್ಕರ ಗೌಡ ಪಂಡಿ ,ಅಧ್ಯಕ್ಷ ಸದಾನಂದ ರೈ ಅರ್ಗುಡಿ,ಪುಟ್ಟಣ್ಣ ದೊಡ್ಡಮನೆ, ವಿಶ್ವನಾಥ ರೈ ಅರ್ಗುಡಿ, ನಾರಾಯಣ ಮಣಿಯಾಣಿ, ಧಾರ್ಮಿಕ ಉತ್ಸವ ಸಮಿತಿಯ ಮಹಿಳಾ ವಿಭಾಗದ ಅಧ್ಯಕ್ಷೆ ತುಳಸಿ ನಾಗೇಶ್ ಸೇರಿದಂತೆ ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.