ಪೈಲಾರು: ಮಳೆ ನೀರಲ್ಲಿ ಕೊಚ್ಚಿಹೋದ ಕೊಚ್ಚಡ್ಕ ಸೇತುವೆಯನ್ನು ಮರು ನಿರ್ಮಾಣ ಮಾಡುವ ಬಗ್ಗೆ ಭರವಸೆ ನೀಡಿದ ಹರೀಶ್ ಕಂಜಿಪಿಲಿ

0

 

 

ಸೆ. 5ರಂದು ಸುರಿದ ಭಾರಿ ಮಳೆಗೆ ಕೊಚ್ಚಿ ಹೋದ ಕೊಚ್ಚಡ್ಕ ಸೇತುವೆಯನ್ನು ವೀಕ್ಷಿಸಲು ಆಗಮಿಸಿದ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಶೀಘ್ರದಲ್ಲಿ ನೂತನ ಸೇತುವೆಯನ್ನು ನಿರ್ಮಿಸಿಕೊಡುವುದಾಗಿ ಹೇಳಿದ್ದಾರೆ. ಸೆ. 7ರಂದು ಘಟನಾ ಸ್ಥಳಕ್ಕೆ ಆಗಮಿಸಿ ಕಂಜಿಪಿಲಿಯವರು ಭರವಸೆಯನ್ನು ನೀಡಿದ್ದಾರೆ ಎಂದು ಅಮರ ಮುಡ್ನೂರು ಗ್ರಾ.ಪಂ. ಸದಸ್ಯ ಕೃಷ್ಣಪ್ರಸಾದ್ ಮಾಡಬಾಕಿಲು ಸುದ್ದಿಗೆ ತಿಳಿಸಿದ್ದಾರೆ.


ಈ ಸಂದರ್ಭದಲ್ಲಿ ಗ್ರಾ. ಪಂ. ಸದಸ್ಯರು ಹಾಗೂ ಪಕ್ಷದ ಸ್ಥಳೀಯ ನಾಯಕರು, ಕಾರ್ಯಕರ್ತರು ಹಾಜರಿದ್ದರು.