ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ಕೆ.ಪಿ.ಎಸ್. ಬೆಳ್ಳಾರೆ ಪ್ರಾಥಮಿಕ ವಿಭಾಗದಲ್ಲಿ ಸೆ. ೯ರಂದು ಆಯೋಜಿಸಲಾಯಿತು. ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ ಪಂದ್ಯಾಟವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಸ್ಪರ್ಧಾ ಮನೋಭಾವದಿಂದ ಭಾಗವಹಿಸಿ ಸೋಲುಗೆಲುವನ್ನು ಸಮಾನವಾಗಿ ಸ್ವೀಕರಿಸಿ ಎಂದು ಸಲಹೆನೀಡಿದರು.
ಮುಖ್ಯಅತಿಥಿಗಳಾಗಿ ಮಾತನಾಡಿದ ಪದ್ಮನಾಭ ನೆಟ್ಟಾರು, ಕೆ.ಪಿ.ಎಸ್. ಬೆಳ್ಳಾರೆ ಸಂಸ್ಥೆಯು ಜಿಲ್ಲೆ, ರಾಜ್ಯ ಮಟ್ಟದಲ್ಲಿ ಗುರುತಿಸುವಂತಾಗಿರುವುದು ಹೆಮ್ಮೆಯ ವಿಷಯ, ಮುಂದೆಯೂಇಲ್ಲಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತಾಗಲಿಎಂದು ಶುಭನುಡಿದರು.
ಈ ಸಂದರ್ಭದಲ್ಲಿ ಕೆಪಿಎಸ್ ಬೆಳ್ಳಾರೆಯ ಏಳನೇ ತರಗತಿಯ ವಿದ್ಯಾರ್ಥಿನಿ ಲಾವಣ್ಯ ಶೆಟ್ಟಿ ಇವಳ ಅನಾರೋಗ್ಯದ ಕಾರಣ ಶಾಲಾಪೋಷಕರು ನೀಡಿದರು. ೩೩,೦೦೦ ಮೊತ್ತವನ್ನು ತಂದೆ ರಾಧಾಕೃಷ್ಣರಿಗೆ ಹಸ್ತಾಂತರಿಸಲಾಯಿತು.
ತಾಲೂಕು ಮಟ್ಟದ ಪಂದ್ಯಾಟದ ಸಮಾರೋಪ ಸಮಾರಂಭವು ಕೆ.ಪಿ.ಎಸ್. ಪ್ರಾಥಮಿಕ ವಿಭಾಗದಲ್ಲಿ ನಡೆಯಿತು. ವೇದಿಕೆಯಲ್ಲಿ ಕೆ.ಪಿ.ಎಸ್. ಉಪಪ್ರಾಂಶುಪಾಲೆ ಶ್ರೀಮತಿ ಉಮಾಕುಮಾರಿ, ಕಟ್ಟಡ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಹರ್ಷ ಜೋಗಿಬೆಟ್ಟು, ಕೆ.ಪಿ.ಎಸ್. ಪ್ರೌಢ ವಿಭಾಗದ ದೈಹಿಕ ಶಿಕ್ಷಕಿ ಶ್ರೀಮತಿ ಪುಷ್ಪಾ, ಸೈಂಟ್ ಬ್ರಿಜಿಡ್ಸ್ ಸುಳ್ಯದ ದೈಹಿಕ ಶಿಕ್ಷಣ ಶಿಕ್ಷಕರಾದ ಉಮೇಶ್, ಕೆ.ಪಿ.ಎಸ್. ಪ್ರಾಥಮಿಕ ವಿಭಾಗದ ಮುಖ್ಯಗುರುಗಳಾದ ಮಾಯಿಲಪ್ಪ ಜಿ., ಕೆ.ಪಿ.ಎಸ್. ಪ್ರಾಥಮಿಕ ವಿಭಾಗದ ದೈಹಿಕ ಶಿಕಣ ಶಿಕ್ಷಕಿ ಶ್ರೀಮತಿ ಪಾರ್ವತಿ ಉಪಸ್ಥಿತರಿದ್ದರು. ಅಧ್ಯಕ್ಷತೆ ವಹಿಸಿದ್ದ ಉಪಪ್ರಾಂಶುಪಾಲೆ ಮಾತನಾಡಿ ಎಲ್ಲಾ ಪಂದ್ಯಾಟಗಳಲ್ಲಿ ಸ್ಪರ್ಧಾ ಸ್ಫೂರ್ತಿಯಿಂದ ಭಾಗವಹಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.