ನಿವೃತ್ತ ಶಿಕ್ಷಕ ಚಂದ್ರಶೇಖರ ಕುಕ್ಕುಪುಣಿಯವರಿಗೆ ಬೀಳ್ಕೊಡುಗೆ

0

 

 

ಆ. 31ರಂದು ನಿವೃತ್ತಿ ಹೊಂದಿದ ಕೂತ್ಕುಂಜ ಸ.ಹಿ.ಪ್ರಾ. ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಚಂದ್ರಶೇಖರ ಕುಕ್ಕುಪುಣಿಯವರಿಗೆ ಬೀಳ್ಕೊಡುಗೆ ಸಮಾರಂಭ ಸೆ. 6ರಂದು ಕೂತ್ಕುಂಜ ಶಾಲೆಯಲ್ಲಿ ನಡೆಯಿತು.

ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷೆ ಶ್ರೀಮತಿ ವನಿತಾರವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಹಿರಿಯರಾದ ಶಿವರಾಮಯ್ಯ ಕರ್ಮಜೆ ನಿವೃತ್ತರನ್ನು ಸನ್ಮಾನಿಸಿದರು. ಜೆ.ಸಿ.ಐ ಪಂಜ ಸ್ಥಾಪಕಾಧ್ಯಕ್ಷ ದೇವಿಪ್ರಸಾದ್ ಜಾಕೆ ಅಭಿನಂದನಾ ಮಾತುಗಳನ್ನಾಡಿದರು. ಶಾಲಾ ಪ್ರಭಾರ ಮುಖ್ಯ ಶಿಕ್ಷಕ ವೆಂಕಟ್ರಮಣ ಕೋಟೆಗುಡ್ಡೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪಂಜ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ, ಉಪಾಧ್ಯಕ್ಷೆ ಶ್ರೀಮತಿ ನೇತ್ರಾವತಿ ಕಲ್ಲಾಜೆ, ಮಾಜಿ ಅಧ್ಯಕ್ಷ ಕಾರ್ಯಪ್ಪ ಗೌಡ ಚಿದ್ಗಲ್, ಪಂಜ ವಲಯ ಶಿಕ್ಷಣ ಸಂಯೋಜಕ ಶ್ರೀಮತಿ ಸಂಧ್ಯಾ, ಪಂಜ ಎಣ್ಮೂರು ಸಮೂಹ ಸಂಪನ್ಮೂಲ ವ್ಯಕ್ತಿ ಜಯಂತ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ‌ ಶ್ರೀಮತಿ ಸರೋಜಿನಿ, ಶಾಲೆಯ ಧಾನಿಗಳಾದ ವೆಂಕಟೇಶ್ವರ ಜೋಯಿಸ ಹೆಬ್ಬಾರಹಿತ್ಲು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮುರಳೀಧರ ಕಲ್ಲಾಜೆ, ವಿದ್ಯಾರ್ಥಿ ನಾಯಕ ಜಿತೇಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅತಿಥಿ ಶಿಕ್ಷಕಿಯರಾದ ಗೀತಾ ಸ್ವಾಗತಿಸಿ ಸುಷ್ಮಾ ಟಿ. ವಂದಿಸಿದರು. ಸಹ ಶಿಕ್ಷಕಿ ತಸ್ಲಿನ ಕಾರ್ಯಕ್ರಮ ನಿರೂಪಿಸಿದರು.