ರೈಟು ಟು ಲಿವ್ ಕೋಟೆ ಫೌಂಡೇಶನ್ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್

0

 

 

ರೈಟು ಟು ಲಿವ್ ಕೋಟೆ ಫೌಂಡೇಶನ್ ವತಿಯಿಂದ ಸಂಪಾಜೆ ಮತ್ತು ದುಗ್ಗಲಡ್ಕ ಸರಕಾರಿ ಪ್ರೌಢ ಶಾಲೆಯಲ್ಲಿ ಕಳೆದ ಶೈಕ್ಷಣಿಕ ವರ್ಷದ ಹತ್ತನೇ ತರಗತಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಒಟ್ಟು 5 ವಿದ್ಯಾರ್ಥಿಗಳಿಗೆ ಸ್ಕಾಲರ್ಷಿಪ್ ವಿತರಿಸಲಾಯಿತು.

ಸ್ನೇಹ ಶಾಲೆಯ ಮುಖ್ಯಸ್ಥರಾದ ಚಂದ್ರ ಶೇಖರ್ ದಾಮ್ಲೆ ಮತ್ತು ಜಯಲಕ್ಷ್ಮಿ ದಾಮ್ಲೆಯವರು ಸ್ಕಾಲರ್ಶಿಪ್ ವಿತರಿಸಿದರು. ಈ ಸಂದರ್ಭದಲ್ಲಿ ರೈಟ್ ಟು ಲಿವ್ ನ ಪ್ರದೀಪ್ ಉಬರಡ್ಕ ಹಾಗೂ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.