ಸಂಪಾಜೆ ಸಹಕಾರಿ ಸಂಘದಿಂದ ಮರಣ ನಿಧಿ ಹಸ್ತಾಂತರ

0

 

ದ. ಕ. ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರಾಗಿದ್ದು , ಇತ್ತೀಚೆಗೆ ಮೃತಪಟ್ಟ ಬಾಲಕಿ ಪೆರುಗೋಡಿ ಅವರ
ಮನೆಗೆ ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆಯವರು ತೆರಳಿ ಸಂಘದ ವತಿಯಿಂದ ನೀಡಲ್ಪಡುವ ಮರಣ ನಿಧಿ ರೂಪಾಯಿ ಹತ್ತು ಸಾವಿರವನ್ನು ಅವರ ಮನೆಯವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಮಹಮ್ಮದ್ ಕುಂಞಿ ಗೂನಡ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೀರೇಂದ್ರ ಕುಮಾರ್ ಜೈನ್, ನಿರ್ದೇಶಕರಾದ ಗಣಪತಿ ಭಟ್ ಪಿ. ಎನ್, ಜಗದೀಶ ರೈ ಕೆ ಆರ್, ಯಮುನಾ ಬಿ.ಎಸ್ ಮತ್ತು ಸುಮತಿ ಎಸ್ ರವರು ಹಾಜರಿದ್ದರು.