ಸುಳ್ಯದ ನೆಹರು ಮೆಮೋರಿಯಲ್ ಪ ಪೂ ಕಾಲೇಜಿನಲ್ಲಿ ಸ 14ರಂದು ಹಿಂದಿ ದಿವಸ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾ oಶುಪಾಲರಾದ ಹರಿಣಿ ಪುತ್ತೂರಾಯ ಅವರು ಮಾತನಾಡಿ ಹಿಂದಿ ಭಾಷೆಯು ರಾಷ್ಟ್ರೀಯ ಏಕತೆಯನ್ನು ಒಗ್ಗೂಡಿಸುವ ಮೂಲಕ ನಮ್ಮನ್ನು ಬಂಧಿಸುತ್ತದೆ.ದೇಶದ ಏಕೀಕರಣ,ಏಕತೆಯನ್ನು ಸಾಧಿಸಲು ಭಾಷೆಯ ಮೂಲಕ ಸಾಧ್ಯ.ಸಂವಹನ ಭಾಷೆಯಾಗಿ ಸಂಸ್ಕೃತಿ ಯ ಅರಿವಾಗಲು ಭಾಷೆ ಪ್ರಮುಖ ಪಾತ್ರ ವಹಿಸುತ್ತದೆ ಹಿಂದಿ ಭಾಷೆಯನ್ನು ಎಲ್ಲರೂ ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯವಾಗಬೇಕು ಎಂದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಾಧಿಕಾರಿಗಳಾದ ದಾಮೋದರ ಪಿ,ಸಾವಿತ್ರಿ ಕೆ,ಹಿಂದಿ ಉಪನ್ಯಾಸಕಿ ರಾಜೇಶ್ವರಿ ಉಪಸ್ಥಿತರಿದ್ದರು.