ಶಾಲಾ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಜಯನಗರ ಇವರ ಆಶ್ರಯದಲ್ಲಿ ಸೆ.13 ರಂದು ಜಯನಗರ ಶಾಲೆಯಲ್ಲಿ ನಡೆದ ಶಿಕ್ಷಣ ಇಲಾಖೆಯ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಜ್ಞಾನದೀಪ ಎಲಿಮಲೆ ವಿದ್ಯಾಸಂಸ್ಥೆಯ ಬಾಲಕಿಯರು ಪ್ರಥಮ ಸ್ಥಾನ ಪಡೆದು ಸೆ.23 ರಂದು ಬೆಳ್ತಂಗಡಿ ತಾಲೂಕಿನ ಪಡಂಗಡಿಯಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.